ಮಂಡ್ಯ: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇತರೆ ಯೋಜನೆಗಳಿಗೆ ಹೋಲಿಸಿದರೆ ಗೃಹಲಕ್ಷ್ಮಿಯೋಜನೆಯಲ್ಲಿ ಹೆಚ್ಚಾಗಿ ಸಮಸ್ಯೆಗಳು ಕಂಡು ಬರುತ್ತಿದ್ದು, ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಿಕ್ಕಲಿಂಗಯ್ಯ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ 12,000 ಫಲಾನುಭವಿಗಳಿಗೆ ಕಳೆದ ಬಾರಿ ಗೃಹಲಕ್ಷ್ಮಿ ಹಣ ತಲುಪಿಲ್ಲ ಎಂದು ಮಾಹಿತಿ ಬಂದಿದ್ದು, ಈ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದರು.
ಇದನ್ನು ಓದಿ : ರಾಜಕೀಯಕ್ಕಾಗಿ ಗ್ಯಾರಂಟಿ ಯೋಜನೆ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ಅನ್ನಭಾಗ್ಯ ಯೋಜನೆಯಡಿಯಲ್ಲಿ 2025ರ ಫೆಬ್ರವರಿ ಮಾಹೆಯಿಂದ ನಗದು ಬದಲು ಅಕ್ಕಿ ನೀಡಲಾಗುತ್ತಿದೆ. ಪ್ರತಿ ಮಾಹೆಯಲ್ಲಿ ಸಾರ್ವಜನಿಕರಿಗೆ ವಿತರಿಸುವ ಅಕ್ಕಿ ಮತ್ತು ರಾಗಿಯ ಅಂಕಿ – ಅಂಶ ವರದಿಯನ್ನು ಮುಂದಿನ ಸಭೆಗಳಲ್ಲಿ ಸಲ್ಲಿಸಬೇಕು ಎಂದು ಹೇಳಿದರು.
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 2023 ರ ಜೂನ್ ಮಾಹೆಯಿಂದ 2025 ರ ಆಗಸ್ಟ್ ಮಾಹೆಯವರೆಗೆ ಒಟ್ಟು 1599.17 ಲಕ್ಷ ಮಹಿಳೆಯರು ಉಚಿತ ಟಿಕೆಟ್ ಪಡೆದು ಸಂಚರಿಸಿದ್ದಾರೆ. ಜಿಲ್ಲೆಯಲ್ಲಿ ಕೆಲವೆಡೆ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ಗಳು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರಿಂದ ದೂರು ಬರುತ್ತಿದೆ. ಡಿಪೋ ಮ್ಯಾನೇಜರ್ ಗಳಿಗೆ ಸಾರ್ವಜನಿಕರೊಂದಿಗೆ ಸರಿಯಾಗಿ ಸ್ಪಂದಿಸಲು ತಿಳಿಸಿ ಎಂದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…