ಮಂಡ್ಯ

ಗಣೇಶ ಉತ್ಸವದಲ್ಲಿ ಡಿಜೆ ಬಳಕೆಗೆ ಕಡಿವಾಣ ಹಾಕಿ : ಜಿಲ್ಲಾಡಳಿತಕ್ಕೆ ಸಾಮಾಜಿಕ ಕಾರ್ಯಕರ್ತರ ಮನವಿ

ಮಂಡ್ಯ : ಗಣೇಶ ಉತ್ಸವದ ಬಳಿಕ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಎಲ್.ತುಳಸಿಧರ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಗೌರಿ-ಗಣೇಶ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆ ಮಾಡುತ್ತಿರುವುದು ಸರಿಯಲ್ಲ. ಶಬ್ಧ ಮಾಲಿನ್ಯದ ಜೊತೆಗೆ ವೃದ್ಧರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಗಲಾಟೆಗೂ ಅವಕಾಶ ಮಾಡಿಕೊಡುತ್ತಿದೆ ಎಂದಿದ್ದಾರೆ.

ಡಿಜೆ ಶಬ್ದ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಹೃದಯದ ಆರೋಗ್ಯ ಸಮಸ್ಯೆ ಇರುವವರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಅದೇ ರೀತಿ ಶಬ್ದ ಮಾಲಿನ್ಯದಿಂದ ಇತರ ಆರೋಗ್ಯದ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ. ಮೆರವಣಿಗೆ ಸಾಗುವ ಹಾದಿಯಲ್ಲಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‌ಗಳು ಇರಲಿವೆ. ಚಿಕಿತ್ಸೆಗೆ ದಾಖಲಾಗಿರುವ ಅನಾರೋಗ್ಯ ಪೀಡಿತರ ಮೇಲೆ ಡಿಜೆ ಸೌಂಡಿನಿಂದ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚಿದೆ ಎಂದು ದೂರಿದ್ದಾರೆ.

ಡಿಜೆ ನಿರ್ಬಂಧಿಸಿ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ಜಾನಪದ ಕಲೆಗಳಾದ ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ, ನಂದಿ ಕಂಬ, ಯಕ್ಷಗಾನ ಹಾಗೂ ಇನ್ನಿತರಕಲಾ ತಂಡಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಅಧಿಕ್ಷಕರಲ್ಲಿ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago