ಮಂಡ್ಯ: ಶಾಸಕ ಎಚ್.ಡಿ ರೇವಣ್ಣ ಒಳ್ಳೆ ನಡವಳಿಕೆಯ ವ್ಯಕ್ತಿಯಲ್ಲ. ಆತನ ವರ್ತನೆ ಸರಿಯಿಲ್ಲ ಹಿಂದೆ ಲಂಡನ್ ಹೋಗಿದ್ದಾಗಲೂ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕೊಂಡಿದ್ದರು ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಇಷ್ಟೆಲ್ಲಾ ದೌರ್ಜನ್ಯ ನಡೆಸುತ್ತಿದ್ದರು, ಅವರ ತಂದೆ ತಾಯಿ ಏನು ಕತ್ತೆ ಕಾಯುತ್ತಿದ್ದರಾ? ಎಂದು ಪ್ರಶ್ನೆ ಮಾಡಿರುವ ಅವರು, ಸರ್ಕಾರ ಇವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.
ಸರ್ಕಾರ ಪೆನ್ಡ್ರೈವ್ ಸಾರ್ವಜನಿಕರ ಕೈ ಸೇರದಂತೆ ನೋಡಿಕೊಳ್ಳಬೇಕು ಹಾಗೂ ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು. ಮತ್ತು ಚುನಾವನಾ ಇಲಾಖೆ ರೇವಣ್ಣ ಗೆದ್ದರೇ ಆತ ರಾಜೀನಾಮೆ ನೀಡಬೇಕು ಇಲ್ಲದಿದ್ದಲ್ಲಿ ಫಲಿತಾಂಶಕ್ಕೆ ತಡೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಬಿಜೆಪಿಯ ಬಾಯಿ ಕಟ್ಟಿಹಾಕಿದಂತಾಗಿದೆ. ಈ ಪೆನ್ಡ್ರೈವ್ ಪ್ರಕರಣದಿಂದ ಬಿಜೆಪಿಗೂ ಹಿನ್ನಡೆಯಾಗುವ ಸಂಭವವಿದ್ದು, ಕೂಡಲೇ ಎನ್ಡಿಎ ಕೂಟದಿಂದ ಜೆಡಿಎಸ್ ಪಕ್ಷವನ್ನು ತೆಗೆದುಹಾಕಿ ಅವರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…