Mysore
27
broken clouds

Social Media

ಸೋಮವಾರ, 31 ಆಗಸ್ಟ್ 2026
Light
Dark

1.50 ಕೋಟಿ ವೆಚ್ಚದಲ್ಲಿ ರಸ್ತೆ,ಚರಂಡಿ ಕಾಮಗಾರಿಗೆ ಚಾಲನೆ

sewerage works to be launched

ಮಂಡ್ಯ : 1.50 ಕೋಟಿ ರೂ ವೆಚ್ಚದ ನಗರದ ಚೀರನಹಳ್ಳಿ-ಹಾಲಹಳ್ಳಿ ಸಂಪರ್ಕ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ದ್ವಾರಕಾನಗರ ಮತ್ತು ಚೀರನಹಳ್ಳಿ ಗ್ರಾಮವು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ದ್ವಾರಕಾ ನಗರದ ನಿವಾಸಿಗಳಿಗೆ ಸಮರ್ಪಕ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ಬಂದಾಗ ಈ ರಸ್ತೆಯಲ್ಲಿ ಓಡಾಡಲು ಬಹಳ ತೊಂದರೆ ಆಗಿದೆ ಎಂದು ಮುಖಂಡರು ತಿಳಿಸಿದ್ದರು.

ಹಾಗಾಗಿ ಸರ್ಕಾರದಿಂದ 1.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ದ್ವಾರಕಾ ನಗರದ ನಿವಾಸಿಗಳಿಗೆ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.

ಈ ವೇಳೆ ಅರಕೆರೆ ಸಂತೋಷ್, ಬೇಲೂರು ಸೋಮ, ಮಹೇಶ್, ಶಶಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Tags:
error: Content is protected !!