ಮಂಡ್ಯ: ಮನೆಯವರು ದೇವಾಲಯಕ್ಕೆ ಹೋಗಿರುವುದನ್ನು ಗಮನಿಸಿ 75 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಗ್ರಾಮದ ಸಿದ್ದೇಗೌಡ ಮತ್ತು ರಾಧಾ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ 15 ಗ್ರಾಂ ತೂಕದ ಮೂರು ಜೊತೆ ಓಲೆಗಳು, 10 ಗ್ರಾಂ ಕುತ್ತಿಗೆ ಚೈನ್ ಹಾಗೂ 50 ಗ್ರಾಂ ಸರ ಕಳ್ಳತನ ಮಾಡಲಾಗಿದೆ.
ಮಂಡ್ಯ ತಾಲ್ಲೂಕಿನ ದೊಡ್ಡ ಬಾಣಸವಾಡಿ ಗ್ರಾಮಕ್ಕೆ ಕಾರ್ತಿಕ ಮಾಸದ ಮನೆ ದೇವರ ಪೂಜೆಗೆ ಸಿದ್ದೇಗೌಡ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನೇ ಬಳಸಿಕೊಂಡ ಕಳ್ಳರು ಮನೆಯ ಹಿತ್ತಲಿನಿಂದ ನುಗ್ಗೇಮರದ ಮೇಲೇರಿ ಹೆಂಚುಗಳನ್ನು ತೆಗೆದು, ಜಂತಿಯನ್ನು ಕಿತ್ತು ಅಡುಗೆ ಮನೆಗಿಳಿದಿದ್ದಾರೆ.
ನಂತರ ಬೀರು ಬಾಗಿಲ್ಲನ್ನು ಅಲ್ಲಿಯೇ ಪಕ್ಕದಲ್ಲಿದ್ದ ಕೊಡಲಿಯಿಂದ ಒಡೆದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಸರಿ ಸುಮಾರು ರಾತ್ರಿ 10.30 ಗಂಟೆಯ ಸುಮಾರಿನಲ್ಲಿ ಕಳ್ಳತನ ಮಾಡಿದ್ದು, ಪೂಜೆ ಮುಗಿಸಿ 11.15 ಗಂಟೆಗೆ ಗ್ರಾಮಕ್ಕೆ ಕುಟುಂಬ ಆಗಮಿಸಿದೆ.
ಮನೆಯೊಳಗೆ ಬಂದು ನೋಡಿದ ಸಿದ್ದೇಗೌಡ ಅವರ ಹೆಂಡತಿ ರಾಧ ಅವರಿಗೆ ಬೀರು ಮುರಿದಿರುವುದು, ಒಡವೆ ಬಾಕ್ಸ್ ಗಳು ಚೆಲ್ಲಾಡಿರುವುದು ಕಂಡುಬಂದಿದೆ. ಆದರೆ ಅಡುಗೆ ಮನೆಯಲ್ಲಿ 10 ಗ್ರಾಂ ತೂಕದ ಚಿನ್ನದ ಗುಂಡಿನ ಸರವನ್ನು ಕಳ್ಳರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿದು ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…