Categories: ಮಂಡ್ಯ

ರಾಗಿಮುದ್ದನಹಳ್ಳಿ: 75 ಗ್ರಾಂ ಚಿನ್ನದ ಒಡವೆಗಳು ಕಳ್ಳತನ

ಮಂಡ್ಯ: ಮನೆಯವರು ದೇವಾಲಯಕ್ಕೆ ಹೋಗಿರುವುದನ್ನು ಗಮನಿಸಿ 75 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಗ್ರಾಮದ ಸಿದ್ದೇಗೌಡ ಮತ್ತು ರಾಧಾ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ 15 ಗ್ರಾಂ ತೂಕದ ಮೂರು ಜೊತೆ ಓಲೆಗಳು, 10 ಗ್ರಾಂ ಕುತ್ತಿಗೆ ಚೈನ್ ಹಾಗೂ 50 ಗ್ರಾಂ ಸರ ಕಳ್ಳತನ ಮಾಡಲಾಗಿದೆ.

ಮಂಡ್ಯ ತಾಲ್ಲೂಕಿನ ದೊಡ್ಡ ಬಾಣಸವಾಡಿ ಗ್ರಾಮಕ್ಕೆ ಕಾರ್ತಿಕ ಮಾಸದ ಮನೆ ದೇವರ ಪೂಜೆಗೆ ಸಿದ್ದೇಗೌಡ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನೇ ಬಳಸಿಕೊಂಡ ಕಳ್ಳರು ಮನೆಯ ಹಿತ್ತಲಿನಿಂದ ನುಗ್ಗೇಮರದ ಮೇಲೇರಿ ಹೆಂಚುಗಳನ್ನು ತೆಗೆದು, ಜಂತಿಯನ್ನು ಕಿತ್ತು ಅಡುಗೆ ಮನೆಗಿಳಿದಿದ್ದಾರೆ‌.

ನಂತರ ಬೀರು ಬಾಗಿಲ್ಲನ್ನು ಅಲ್ಲಿಯೇ ಪಕ್ಕದಲ್ಲಿದ್ದ ಕೊಡಲಿಯಿಂದ ಒಡೆದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಸರಿ ಸುಮಾರು ರಾತ್ರಿ 10.30 ಗಂಟೆಯ ಸುಮಾರಿನಲ್ಲಿ ಕಳ್ಳತನ ಮಾಡಿದ್ದು, ಪೂಜೆ ಮುಗಿಸಿ 11.15 ಗಂಟೆಗೆ ಗ್ರಾಮಕ್ಕೆ ಕುಟುಂಬ ಆಗಮಿಸಿದೆ.

ಮನೆಯೊಳಗೆ ಬಂದು ನೋಡಿದ ಸಿದ್ದೇಗೌಡ ಅವರ ಹೆಂಡತಿ ರಾಧ ಅವರಿಗೆ ಬೀರು ಮುರಿದಿರುವುದು, ಒಡವೆ ಬಾಕ್ಸ್ ಗಳು ಚೆಲ್ಲಾಡಿರುವುದು ಕಂಡುಬಂದಿದೆ. ಆದರೆ ಅಡುಗೆ ಮನೆಯಲ್ಲಿ 10 ಗ್ರಾಂ ತೂಕದ ಚಿನ್ನದ ಗುಂಡಿನ ಸರವನ್ನು ಕಳ್ಳರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದು ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

30 ಕೆಜಿ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ, ಇಬ್ಬರ ಬಂಧನ

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…

16 seconds ago

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

52 mins ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

3 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

5 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

5 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

5 hours ago