ಮಂಡ್ಯ: ಮನೆಯವರು ದೇವಾಲಯಕ್ಕೆ ಹೋಗಿರುವುದನ್ನು ಗಮನಿಸಿ 75 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಗ್ರಾಮದ ಸಿದ್ದೇಗೌಡ ಮತ್ತು ರಾಧಾ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ 15 ಗ್ರಾಂ ತೂಕದ ಮೂರು ಜೊತೆ ಓಲೆಗಳು, 10 ಗ್ರಾಂ ಕುತ್ತಿಗೆ ಚೈನ್ ಹಾಗೂ 50 ಗ್ರಾಂ ಸರ ಕಳ್ಳತನ ಮಾಡಲಾಗಿದೆ.
ಮಂಡ್ಯ ತಾಲ್ಲೂಕಿನ ದೊಡ್ಡ ಬಾಣಸವಾಡಿ ಗ್ರಾಮಕ್ಕೆ ಕಾರ್ತಿಕ ಮಾಸದ ಮನೆ ದೇವರ ಪೂಜೆಗೆ ಸಿದ್ದೇಗೌಡ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನೇ ಬಳಸಿಕೊಂಡ ಕಳ್ಳರು ಮನೆಯ ಹಿತ್ತಲಿನಿಂದ ನುಗ್ಗೇಮರದ ಮೇಲೇರಿ ಹೆಂಚುಗಳನ್ನು ತೆಗೆದು, ಜಂತಿಯನ್ನು ಕಿತ್ತು ಅಡುಗೆ ಮನೆಗಿಳಿದಿದ್ದಾರೆ.
ನಂತರ ಬೀರು ಬಾಗಿಲ್ಲನ್ನು ಅಲ್ಲಿಯೇ ಪಕ್ಕದಲ್ಲಿದ್ದ ಕೊಡಲಿಯಿಂದ ಒಡೆದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಸರಿ ಸುಮಾರು ರಾತ್ರಿ 10.30 ಗಂಟೆಯ ಸುಮಾರಿನಲ್ಲಿ ಕಳ್ಳತನ ಮಾಡಿದ್ದು, ಪೂಜೆ ಮುಗಿಸಿ 11.15 ಗಂಟೆಗೆ ಗ್ರಾಮಕ್ಕೆ ಕುಟುಂಬ ಆಗಮಿಸಿದೆ.
ಮನೆಯೊಳಗೆ ಬಂದು ನೋಡಿದ ಸಿದ್ದೇಗೌಡ ಅವರ ಹೆಂಡತಿ ರಾಧ ಅವರಿಗೆ ಬೀರು ಮುರಿದಿರುವುದು, ಒಡವೆ ಬಾಕ್ಸ್ ಗಳು ಚೆಲ್ಲಾಡಿರುವುದು ಕಂಡುಬಂದಿದೆ. ಆದರೆ ಅಡುಗೆ ಮನೆಯಲ್ಲಿ 10 ಗ್ರಾಂ ತೂಕದ ಚಿನ್ನದ ಗುಂಡಿನ ಸರವನ್ನು ಕಳ್ಳರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿದು ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…