ಮಂಡ್ಯ: ಮನೆಯವರು ದೇವಾಲಯಕ್ಕೆ ಹೋಗಿರುವುದನ್ನು ಗಮನಿಸಿ 75 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಗ್ರಾಮದ ಸಿದ್ದೇಗೌಡ ಮತ್ತು ರಾಧಾ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ 15 ಗ್ರಾಂ ತೂಕದ ಮೂರು ಜೊತೆ ಓಲೆಗಳು, 10 ಗ್ರಾಂ ಕುತ್ತಿಗೆ ಚೈನ್ ಹಾಗೂ 50 ಗ್ರಾಂ ಸರ ಕಳ್ಳತನ ಮಾಡಲಾಗಿದೆ.
ಮಂಡ್ಯ ತಾಲ್ಲೂಕಿನ ದೊಡ್ಡ ಬಾಣಸವಾಡಿ ಗ್ರಾಮಕ್ಕೆ ಕಾರ್ತಿಕ ಮಾಸದ ಮನೆ ದೇವರ ಪೂಜೆಗೆ ಸಿದ್ದೇಗೌಡ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನೇ ಬಳಸಿಕೊಂಡ ಕಳ್ಳರು ಮನೆಯ ಹಿತ್ತಲಿನಿಂದ ನುಗ್ಗೇಮರದ ಮೇಲೇರಿ ಹೆಂಚುಗಳನ್ನು ತೆಗೆದು, ಜಂತಿಯನ್ನು ಕಿತ್ತು ಅಡುಗೆ ಮನೆಗಿಳಿದಿದ್ದಾರೆ.
ನಂತರ ಬೀರು ಬಾಗಿಲ್ಲನ್ನು ಅಲ್ಲಿಯೇ ಪಕ್ಕದಲ್ಲಿದ್ದ ಕೊಡಲಿಯಿಂದ ಒಡೆದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಸರಿ ಸುಮಾರು ರಾತ್ರಿ 10.30 ಗಂಟೆಯ ಸುಮಾರಿನಲ್ಲಿ ಕಳ್ಳತನ ಮಾಡಿದ್ದು, ಪೂಜೆ ಮುಗಿಸಿ 11.15 ಗಂಟೆಗೆ ಗ್ರಾಮಕ್ಕೆ ಕುಟುಂಬ ಆಗಮಿಸಿದೆ.
ಮನೆಯೊಳಗೆ ಬಂದು ನೋಡಿದ ಸಿದ್ದೇಗೌಡ ಅವರ ಹೆಂಡತಿ ರಾಧ ಅವರಿಗೆ ಬೀರು ಮುರಿದಿರುವುದು, ಒಡವೆ ಬಾಕ್ಸ್ ಗಳು ಚೆಲ್ಲಾಡಿರುವುದು ಕಂಡುಬಂದಿದೆ. ಆದರೆ ಅಡುಗೆ ಮನೆಯಲ್ಲಿ 10 ಗ್ರಾಂ ತೂಕದ ಚಿನ್ನದ ಗುಂಡಿನ ಸರವನ್ನು ಕಳ್ಳರು ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿದು ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…