ಮಂಡ್ಯ

ಕಾವೇರಿಗಾಗಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರ ಉರುಳು ಸೇವೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕನ್ನಡಿಗರ ಪರ ಬರಲಿ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಉರುಳು ಸೇವೆ ಆರಂಭಿಸಿದ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ, ಯೋಗೇಶ್ ಗೌಡ,ಬೆಂಕಿ ಶ್ರೀಧರ್. ನಾಗಲಕ್ಷ್ಮಿ,ರೋಸಿ,ನಿರ್ಮಲ, ತಸ್ನಿಯ ಬಾನು,ಸೋಮಶೇಖರ್, ಗೋವಿಂದನಾಯಕ್,ಜಯಸಿಂಹ,ಯೇಸು, ರಂಜಿತ್ ಗೌಡ, ಕೃಷ್ಣೇಗೌಡ, ದೇವರಾಜ್ ಉರುಳು ಸೇವೆ ಮಾಡಿದರು.

ಸುಮಾರು ಎರಡು ತಾಸುಗಳ ಕಾಲ ಸರ್ ಎಂ ವಿ ಪ್ರತಿಮೆವರಗೆ ಉರುಳುವ ಮೂಲಕ ಕಾವೇರಿ ವಿಚಾರದಲ್ಲಿ ನ್ಯಾಯಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು ಬೇಕೇ ಬೇಕು ನ್ಯಾಯ ಬೇಕು, ಕಾವೇರಿ ನಮ್ಮದು,ತಕ್ಷಣ ನೀರು ನಿಲ್ಲಿಸಿ,ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ದೊರಕಲಿ ಎಂದು ಘೋಷಣೆ ಕೂಗಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನೀರು ಹರಿಸುತ್ತಿರುವುದನ್ನು ನೋಡಿದರೆ ಮಳೆ ಇಲ್ಲ, ಬೆಳೆ ಇಲ್ಲ. ಮರದಲ್ಲಿ ಗಿಳಿಯೂ ಇಲ್ಲ, ಎಲ್ಲಾ ಮಾಯ, ಎಲ್ಲಾ ಮಾಯ ಮುಂದಿನ ದಿನಗಳಲ್ಲಿ ಕಾವೇರಿ ಕಣಿವೆಯ ಜಮೀನುಗಳಲ್ಲಿ ಎಲ್ಲಾ ಮಾಯ ಎಂದು ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಕೆ ಆರ್ ಎಸ್ ಜಲಾಶಯದಿಂದ ನಿರಂತರವಾಗಿ ನೀರು ಹರಿದು ಹೋಗುತ್ತಿರುವುದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದೆ, ಇದೇ ರೀತಿ ನೀರು ಬಿಡುತ್ತಿದ್ದರೆ ರೈತರ ಪಾಡೇನು, ರಾಜ್ಯ ಸರ್ಕಾರದ ರೈತರಿಗೆ ದ್ರೋಹ ಮಾಡುತ್ತಿದೆ, ಸರ್ಕಾರದ ಮೇಲಿನ ನಂಬಿಕೆ ಹುಸಿಯಾಗಿದ್ದು, ಸರ್ಕಾರವನ್ನು ನಂಬಿ ಕುಳಿತರೆ ಕುಡಿಯಲು ನೀರು ಸಹ ಸಿಗುವುದಿಲ್ಲ ಎಂದು ಆಕ್ರೋಶಿಸಿದರು.

ಕಾವೇರಿ ಮಾತೆ ಪೂಜಿಸಿದ್ದೇವೆ,ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಪರ ತೀರ್ಪು ಬರಲು ಕಾವೇರಮ್ಮ ಕರುಣಿಸಲಿ ಎಂದು ಆಶಿಸಿದರು.

ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಮಾತನಾಡಿ, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲದಂತಾಗಿದೆ, ನಮಗೆ ನೀರು ಇಲ್ಲದ ಮೇಲೆ ತಮಿಳುನಾಡಿಗೆ ಹೇಗೆ ಕೊಡಲು ಸಾಧ್ಯ, ಆದರೆ ರಾಜ್ಯ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿದ್ದಾರೆ, ತಕ್ಷಣ ನೀರು ಸ್ಥಗಿತ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೂರಿದೆ. ಬೆಳೆದು ನಿಂತಿರುವ ಬೆಳೆ ರೈತರ ಕೈ ಸೇರೋಲ್ಲ,ಹೊಸ ಬೆಳೆ ಹಾಕಲು ನೀರಿಲ್ಲ ವಾಸ್ತವ ಪರಿಸ್ಥಿತಿಯನ್ನ ಅರಿಯಬೇಕಾಗಿದೆ ಎಂದರು.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕರ್ನಾಟಕದ ಮೇಲೆ ಗದ ಪ್ರಹಾರ ಮಾಡಬಾರದು, ಪದೇ ಪದೇ ಸುಪ್ರೀಂ ಕೋರ್ಟ್ ಮೊರೆ ಹೋಗಿ ತಮಿಳುನಾಡು ದಬ್ಬಾಳಿಕೆ ನೀತಿ ಅನುಸರಿಸುತ್ತಿದೆ, ಕೊಡುಕೊಳ್ಳುವ ನೀತಿಗೆ ಮುಖ್ಯಮಂತ್ರಿ ಸ್ಟಾಲಿನ್ ಮುಂದಾಗಬೇಕು, ಕರ್ನಾಟಕದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಲು ಮನಸು ಮಾಡಲೇ ಅದನ್ನು ಬಿಟ್ಟು ಹಠ ಮಾರಿ ಧೋರಣೆ ಸರಿಯಲ್ಲ ಎಂದರು.

lokesh

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

4 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

4 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

4 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

4 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

16 hours ago