ಮಂಡ್ಯ

ಕಾವೇರಿಗಾಗಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರ ಉರುಳು ಸೇವೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕನ್ನಡಿಗರ ಪರ ಬರಲಿ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಉರುಳು ಸೇವೆ ಆರಂಭಿಸಿದ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ, ಯೋಗೇಶ್ ಗೌಡ,ಬೆಂಕಿ ಶ್ರೀಧರ್. ನಾಗಲಕ್ಷ್ಮಿ,ರೋಸಿ,ನಿರ್ಮಲ, ತಸ್ನಿಯ ಬಾನು,ಸೋಮಶೇಖರ್, ಗೋವಿಂದನಾಯಕ್,ಜಯಸಿಂಹ,ಯೇಸು, ರಂಜಿತ್ ಗೌಡ, ಕೃಷ್ಣೇಗೌಡ, ದೇವರಾಜ್ ಉರುಳು ಸೇವೆ ಮಾಡಿದರು.

ಸುಮಾರು ಎರಡು ತಾಸುಗಳ ಕಾಲ ಸರ್ ಎಂ ವಿ ಪ್ರತಿಮೆವರಗೆ ಉರುಳುವ ಮೂಲಕ ಕಾವೇರಿ ವಿಚಾರದಲ್ಲಿ ನ್ಯಾಯಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು ಬೇಕೇ ಬೇಕು ನ್ಯಾಯ ಬೇಕು, ಕಾವೇರಿ ನಮ್ಮದು,ತಕ್ಷಣ ನೀರು ನಿಲ್ಲಿಸಿ,ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ದೊರಕಲಿ ಎಂದು ಘೋಷಣೆ ಕೂಗಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನೀರು ಹರಿಸುತ್ತಿರುವುದನ್ನು ನೋಡಿದರೆ ಮಳೆ ಇಲ್ಲ, ಬೆಳೆ ಇಲ್ಲ. ಮರದಲ್ಲಿ ಗಿಳಿಯೂ ಇಲ್ಲ, ಎಲ್ಲಾ ಮಾಯ, ಎಲ್ಲಾ ಮಾಯ ಮುಂದಿನ ದಿನಗಳಲ್ಲಿ ಕಾವೇರಿ ಕಣಿವೆಯ ಜಮೀನುಗಳಲ್ಲಿ ಎಲ್ಲಾ ಮಾಯ ಎಂದು ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಕೆ ಆರ್ ಎಸ್ ಜಲಾಶಯದಿಂದ ನಿರಂತರವಾಗಿ ನೀರು ಹರಿದು ಹೋಗುತ್ತಿರುವುದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದೆ, ಇದೇ ರೀತಿ ನೀರು ಬಿಡುತ್ತಿದ್ದರೆ ರೈತರ ಪಾಡೇನು, ರಾಜ್ಯ ಸರ್ಕಾರದ ರೈತರಿಗೆ ದ್ರೋಹ ಮಾಡುತ್ತಿದೆ, ಸರ್ಕಾರದ ಮೇಲಿನ ನಂಬಿಕೆ ಹುಸಿಯಾಗಿದ್ದು, ಸರ್ಕಾರವನ್ನು ನಂಬಿ ಕುಳಿತರೆ ಕುಡಿಯಲು ನೀರು ಸಹ ಸಿಗುವುದಿಲ್ಲ ಎಂದು ಆಕ್ರೋಶಿಸಿದರು.

ಕಾವೇರಿ ಮಾತೆ ಪೂಜಿಸಿದ್ದೇವೆ,ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಪರ ತೀರ್ಪು ಬರಲು ಕಾವೇರಮ್ಮ ಕರುಣಿಸಲಿ ಎಂದು ಆಶಿಸಿದರು.

ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಮಾತನಾಡಿ, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲದಂತಾಗಿದೆ, ನಮಗೆ ನೀರು ಇಲ್ಲದ ಮೇಲೆ ತಮಿಳುನಾಡಿಗೆ ಹೇಗೆ ಕೊಡಲು ಸಾಧ್ಯ, ಆದರೆ ರಾಜ್ಯ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿದ್ದಾರೆ, ತಕ್ಷಣ ನೀರು ಸ್ಥಗಿತ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೂರಿದೆ. ಬೆಳೆದು ನಿಂತಿರುವ ಬೆಳೆ ರೈತರ ಕೈ ಸೇರೋಲ್ಲ,ಹೊಸ ಬೆಳೆ ಹಾಕಲು ನೀರಿಲ್ಲ ವಾಸ್ತವ ಪರಿಸ್ಥಿತಿಯನ್ನ ಅರಿಯಬೇಕಾಗಿದೆ ಎಂದರು.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕರ್ನಾಟಕದ ಮೇಲೆ ಗದ ಪ್ರಹಾರ ಮಾಡಬಾರದು, ಪದೇ ಪದೇ ಸುಪ್ರೀಂ ಕೋರ್ಟ್ ಮೊರೆ ಹೋಗಿ ತಮಿಳುನಾಡು ದಬ್ಬಾಳಿಕೆ ನೀತಿ ಅನುಸರಿಸುತ್ತಿದೆ, ಕೊಡುಕೊಳ್ಳುವ ನೀತಿಗೆ ಮುಖ್ಯಮಂತ್ರಿ ಸ್ಟಾಲಿನ್ ಮುಂದಾಗಬೇಕು, ಕರ್ನಾಟಕದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಲು ಮನಸು ಮಾಡಲೇ ಅದನ್ನು ಬಿಟ್ಟು ಹಠ ಮಾರಿ ಧೋರಣೆ ಸರಿಯಲ್ಲ ಎಂದರು.

lokesh

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

13 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

38 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

57 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago