ಮಂಡ್ಯ

ಕಾವೇರಿಗಾಗಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರ ಉರುಳು ಸೇವೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕನ್ನಡಿಗರ ಪರ ಬರಲಿ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಉರುಳು ಸೇವೆ ಆರಂಭಿಸಿದ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ, ಯೋಗೇಶ್ ಗೌಡ,ಬೆಂಕಿ ಶ್ರೀಧರ್. ನಾಗಲಕ್ಷ್ಮಿ,ರೋಸಿ,ನಿರ್ಮಲ, ತಸ್ನಿಯ ಬಾನು,ಸೋಮಶೇಖರ್, ಗೋವಿಂದನಾಯಕ್,ಜಯಸಿಂಹ,ಯೇಸು, ರಂಜಿತ್ ಗೌಡ, ಕೃಷ್ಣೇಗೌಡ, ದೇವರಾಜ್ ಉರುಳು ಸೇವೆ ಮಾಡಿದರು.

ಸುಮಾರು ಎರಡು ತಾಸುಗಳ ಕಾಲ ಸರ್ ಎಂ ವಿ ಪ್ರತಿಮೆವರಗೆ ಉರುಳುವ ಮೂಲಕ ಕಾವೇರಿ ವಿಚಾರದಲ್ಲಿ ನ್ಯಾಯಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು ಬೇಕೇ ಬೇಕು ನ್ಯಾಯ ಬೇಕು, ಕಾವೇರಿ ನಮ್ಮದು,ತಕ್ಷಣ ನೀರು ನಿಲ್ಲಿಸಿ,ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ದೊರಕಲಿ ಎಂದು ಘೋಷಣೆ ಕೂಗಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನೀರು ಹರಿಸುತ್ತಿರುವುದನ್ನು ನೋಡಿದರೆ ಮಳೆ ಇಲ್ಲ, ಬೆಳೆ ಇಲ್ಲ. ಮರದಲ್ಲಿ ಗಿಳಿಯೂ ಇಲ್ಲ, ಎಲ್ಲಾ ಮಾಯ, ಎಲ್ಲಾ ಮಾಯ ಮುಂದಿನ ದಿನಗಳಲ್ಲಿ ಕಾವೇರಿ ಕಣಿವೆಯ ಜಮೀನುಗಳಲ್ಲಿ ಎಲ್ಲಾ ಮಾಯ ಎಂದು ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಕೆ ಆರ್ ಎಸ್ ಜಲಾಶಯದಿಂದ ನಿರಂತರವಾಗಿ ನೀರು ಹರಿದು ಹೋಗುತ್ತಿರುವುದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದೆ, ಇದೇ ರೀತಿ ನೀರು ಬಿಡುತ್ತಿದ್ದರೆ ರೈತರ ಪಾಡೇನು, ರಾಜ್ಯ ಸರ್ಕಾರದ ರೈತರಿಗೆ ದ್ರೋಹ ಮಾಡುತ್ತಿದೆ, ಸರ್ಕಾರದ ಮೇಲಿನ ನಂಬಿಕೆ ಹುಸಿಯಾಗಿದ್ದು, ಸರ್ಕಾರವನ್ನು ನಂಬಿ ಕುಳಿತರೆ ಕುಡಿಯಲು ನೀರು ಸಹ ಸಿಗುವುದಿಲ್ಲ ಎಂದು ಆಕ್ರೋಶಿಸಿದರು.

ಕಾವೇರಿ ಮಾತೆ ಪೂಜಿಸಿದ್ದೇವೆ,ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಪರ ತೀರ್ಪು ಬರಲು ಕಾವೇರಮ್ಮ ಕರುಣಿಸಲಿ ಎಂದು ಆಶಿಸಿದರು.

ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಮಾತನಾಡಿ, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲದಂತಾಗಿದೆ, ನಮಗೆ ನೀರು ಇಲ್ಲದ ಮೇಲೆ ತಮಿಳುನಾಡಿಗೆ ಹೇಗೆ ಕೊಡಲು ಸಾಧ್ಯ, ಆದರೆ ರಾಜ್ಯ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿದ್ದಾರೆ, ತಕ್ಷಣ ನೀರು ಸ್ಥಗಿತ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೂರಿದೆ. ಬೆಳೆದು ನಿಂತಿರುವ ಬೆಳೆ ರೈತರ ಕೈ ಸೇರೋಲ್ಲ,ಹೊಸ ಬೆಳೆ ಹಾಕಲು ನೀರಿಲ್ಲ ವಾಸ್ತವ ಪರಿಸ್ಥಿತಿಯನ್ನ ಅರಿಯಬೇಕಾಗಿದೆ ಎಂದರು.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕರ್ನಾಟಕದ ಮೇಲೆ ಗದ ಪ್ರಹಾರ ಮಾಡಬಾರದು, ಪದೇ ಪದೇ ಸುಪ್ರೀಂ ಕೋರ್ಟ್ ಮೊರೆ ಹೋಗಿ ತಮಿಳುನಾಡು ದಬ್ಬಾಳಿಕೆ ನೀತಿ ಅನುಸರಿಸುತ್ತಿದೆ, ಕೊಡುಕೊಳ್ಳುವ ನೀತಿಗೆ ಮುಖ್ಯಮಂತ್ರಿ ಸ್ಟಾಲಿನ್ ಮುಂದಾಗಬೇಕು, ಕರ್ನಾಟಕದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಲು ಮನಸು ಮಾಡಲೇ ಅದನ್ನು ಬಿಟ್ಟು ಹಠ ಮಾರಿ ಧೋರಣೆ ಸರಿಯಲ್ಲ ಎಂದರು.

lokesh

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

14 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

15 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

18 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago