ಮಂಡ್ಯ

ಬೆಲೆ ಏರಿಕೆ ವಿರುದ್ದ ಏ.2 ರಿಂದ ಅಹೋರಾತ್ರಿ ಪ್ರತಿಭಟನೆ

ಮಂಡ್ಯ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬೆಲೆ ಏರಿಕೆ ಹೆಚ್ಚಾಗಿದ್ದು, ಇದ್ದರಿಂದ ಸಾರ್ವಜನಿಕರು ತತ್ತರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಖಂಡಿಸಿ ಏಪ್ರಿಲ್  2ರಂದು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನಾ ರ್‍ಯಾಲಿ ಹಾಗೂ ಏ.೦8ರಂದು ಜನಾಕ್ರೋಷ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಹೋರಾತ್ರಿ ಪ್ರತಿಭಟನಾ ರ್‍ಯಾಲಿಯ ಹಾಗೂ ಜನಾಕ್ರೋಶ ರ್‍ಯಾಲಿಯ ಮೂಲಕ ಬೆಲೆ ಏರಿಕೆ ಸಂಬಂಧ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲು ಗ್ಯಾರೆಂಟಿ ಹೆಸರಿನಲ್ಲಿ ಬೆಲೆ ಏರಿಕೆ ಮಾಡುತ್ತಿದ್ದು, ಅನಗತ್ಯ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಹೊರೆಯಾಗಿ ಹೆಚ್ಚಿಸಿ, ತನ್ನ ಬೊಕ್ಕಸ ತುಂಬಿಕೊಳ್ಳುವಲ್ಲಿ ನಿರತವಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗಿನಿಂದಲೂ ಮೂರು ಬಾರಿ ಹಾಲಿನ ದರ ಏರಿಕೆ ಮಾಡಿ, ರೈತರಿಗೆ ಪ್ರೋತ್ಸಾಹ ಧನ ಹೆಚ್ಚಿಸುತ್ತೇವೆ ಎಂದು ಹೇಳಿದ್ದು, ಮಾತಿಗೆ ತಕ್ಕಂತೆ ನಡೆದುಕೊಳ್ಳದೇ ಇದ್ದು, ರೈತರಿಗೆ ಸುಮಾರು 662 ಕೋಟಿ ರೂ ಬಾಕಿ ಉಳಿಸಿಕೊಂಡಿದೆ. ಇದೀಗ 9 ರೂ ಬೆಲೆ ಏರಿಕೆ ಮಾಡಿ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವನ್ನು ಹೆಚ್ಚಿಸಿಲ್ಲ ಎಂದು ದೂರಿದರು.

ವಿದ್ಯುತ್ ದರ, ಸರ್ಕಾರಿ ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬೆಲೆ, ಮುದ್ರಾಂಕ ಶುಲ್ಕ, ವೃತ್ತಿಪರ ಸೇವೆಗಳ ಬೆಲೆ ಏರಿಕೆ ಮಾಡಿ, ಸಾರ್ವಜನಿಕರಿಗೆ ಜೀವನ ನಡೆಸಲಾಗದಂತೆ ಮಾಡಿದ್ದು, ಎಸ್ಸಿಪಿ ಟಿಎಸ್ಪಿ ಯೋಜನೆಯ 38,860,52 ಕೋಟಿ ಹಣವನ್ನು ಗ್ಯಾರೆಂಟಿ ಹೆಸರಿನಲ್ಲಿ ವಿನಿಯೋಗಿಸಿ ದಲಿತ ಸಮುದಾಯಕ್ಕೆ ಅನ್ಯಾಯವೆಸಗಿದೆ ಎಂದು ಆರೋಪಿಸಿದರು.

ರಾಜ್ಯದ ಬಡವರ, ರೈತರ ಮತ್ತು ಮಹಿಳೆಯರ ಹಿತ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅಲ್ಪಸಂಖ್ಯಾತರಿಗೆ ಶೇ4 ರಷ್ಟು ಮೀಸಲಾತಿ, ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ಮುಟ್ಟಿಸಿ  ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಪರ ಎಂಬುದನ್ನು ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಏ.7ರಂದು ನಡೆಯಲಿರುವ ಜನಾಕ್ರೋಷ ರ್‍ಯಾಲಿಯು ಏ.೦8ರಂದು ಮಂಡ್ಯದಲ್ಲಿ ಜಾಗೃತಿ ಮೂಡಿಸಲಿದ್ದು, ಸುಮಾರು 5 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಟಿ.ಎಸ್.ವಿವೇಕ್, ಉಪಾಧ್ಯಕ್ಷ ಬಿ.ಕೃಷ್ಣ, ನಗರ ಅಧ್ಯಕ್ಷ ವಸಂತ್, ಮಾಧ್ಯಮ ವಕ್ತಾರ ನಾಗಾನಂದ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

22 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

24 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

27 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago