ಮಂಡ್ಯ

ಎಸ್.ಎಂ ಕೃಷ್ಣ ಚಿತೆಗೆ ಅಗ್ನಿ ಸ್ಪರ್ಶ ಮಾಡಲಿರುವ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ್‌

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ.

ಎಸ್‌.ಎಂ.ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ ಸುಮಾರು 2.30 ಗಂಟೆಗೆ ನಿಧನರಾಗಿದ್ದು, ಇಂದು(ಡಿ.11) ಅವರ ಹುಟ್ಟೂರಾಗಿರುವ ಸೋಮನಹಳ್ಳಿಯಲ್ಲಿ ಮಧ್ಯಾಹ್ನ 3 ಗಂಟೆಯ ನಂತರ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನಡೆಯಲಿದೆ. ಅಲ್ಲದೇ ಮೃತರ ಅಂತ್ಯ ಸಂಸ್ಕಾರವನ್ನು ಒಕ್ಕಲಿಗ ಸಂಪ್ರದಾಯದಂತೆ ಮಾಡಲಾಗುತ್ತಿದ್ದು, ಸುಮಾರು 1,000 ಕೆ.ಜಿ.ಯಷ್ಟು ಶ್ರೀಗಂಧದ ಕಟ್ಟಿಗೆಗಳನ್ನು ಅರಣ್ಯ ಇಲಾಖೆಯಿಂದ ಪೂರೈಕೆ ಮಾಡಲಾಗಿದೆ. ಬಳಿಕ ಎಸ್‌.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ.

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವರು, ಶಾಸಕರು, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಜಿಲ್ಲಾಡಳಿತ ಹಾಗೂ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಪೊಲೀಸ್‌ ಇಲಾಖೆಯೂ ಪ್ರಮುಖ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

13 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

13 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

13 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

13 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago