ಮಂಡ್ಯ

ಕೇಂದ್ರದ ನಾಲ್ಕು ಸಂಹಿತೆಗಳನ್ನು ರಾಜ್ಯ ರದ್ದುಪಡಿಸಲಿ : ಎಸ್.ವರಲಕ್ಷಿ ಆಗ್ರಹ

ಮಂಡ್ಯ : ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಬೇಕು. ರಾತ್ರಿಪಾಳಿ ಕಡ್ಡಾಯ ಮಾಡಬಾರದು. ಕೆಲಸದ ಸಮಯವನ್ನು 8 ರಿಂದ 12 ಗಂಟೆಯವರೆಗೆ ಹೆಚ್ಚಿಸಬಾರದು ಎಂದು ಸಿಐಟಿಯು ರಾಜ್ಯ ಘಟಕ ಅಧ್ಯಕ್ಷೆ ಎಸ್.ವರಲಕ್ಷ್ಮಿ ಒತ್ತಾಯಿಸಿದರು.

ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಸಹಯೋಗದಲ್ಲಿ ಭಾನುವಾರ ಮುಕ್ತಾಯಗೊಂಡ ದುಡಿಯುವ ಮಹಿಳೆಯರ 9 ನೇ ರಾಜ್ಯ ಸಮಾವೇಶದ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

13 ಅಪಾಯಕಾರಿ ಉದ್ದಿಮೆಗಳಲ್ಲಿ ಮಹಿಳೆಯರನ್ನು ದುಡಿಸಬಾರದು, ಪ್ಲಾಂಟೇಷನ್, ಗಾರ್ಮೆಂಟ್ಸ್ ಮುಂತಾದ ಉದ್ದಿಮೆಗಳ ಕನಿಷ್ಠ ವೇತನವನ್ನು ಕಡಿಮೆ ಮಾಡಿ, ಪ್ರತ್ಯೇಕವಾಗಿ ಅಧಿಸೂಚನೆಯಲ್ಲಿ ತರದೆ ಇರುವುದು ಸರಿಯಲ್ಲ. ಎಲ್ಲಾ ಕಚೇರಿ ಮತ್ತು ವಲಯಗಳಲ್ಲಿ ಲೈಂಗಿಕ ದೌರ್ಜನ್ಯದ ವಿರುದ್ಧ ಆಂತರಿಕ ದೂರು ಸಮಿತಿಗಳನ್ನು ರಚಿಸಬೇಕು ಎಂದು ತಿಳಿಸಿದರು.

ಅಖಿಲ ಭಾರತ ಸಿಐಟಿಯು ಕಾರ್ಯದರ್ಶಿ ಎ.ಆರ್.ಸಿಂಧು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಪರಿಸ್ಥಿತಿ ನರಕದಂತಿದೆ, ದುಡಿಯುವ ಸ್ಥಳದಲ್ಲಿಯೂ ಕಿರುಕುಳ ಹೆಚ್ಚಾಗಿ ಹೀನ ಕೃತ್ಯಗಳು ಅವರ ಮೇಲೆ ನಡೆಯುತ್ತಿವೆ ಎಂದು ವಿಷಾದಿಸಿದರು.

ಮಧುರಾ, ಕಾಶಿಯಂತಹ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವಂತಹ ಪ್ರಕರಣಗಳು ಬೆಳಕಿಗೆ ಬರುವುದನ್ನು ನಾವು ನೋಡುತ್ತಿದ್ದೇವೆ. ಪುರುಷ ಪ್ರಧಾನ ಪಾಳೆಗಾರಿಕೆ ವ್ಯವಸ್ಥೆ ಒಳಗಡೆ ಮಹಿಳೆಯರನ್ನು ರಕ್ಷಣೆ ಮಾಡುವಂತಹ ವ್ಯವಸ್ಥೆಗಳೇ ದಬ್ಬಾಳಿಕೆ ಮಾಡಲು ಈ ಮಠಗಳು, ರಾಜಕಾರಣಿಗಳು ಇಂತಹ ಘಟನೆಗಳನ್ನು ತಡೆಯುತ್ತಿಲ್ಲ. ಮುಖ್ಯವಾಗಿ ಬಿಜೆಪಿ ಮುಖಂಡ ಬ್ರಿಜ್‌ಭೂಷಣ್ ಎಂಬ ವ್ಯಕ್ತಿ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು, ಅದೇ ರೀತಿ ಅವರ ಬೆಂಬಲ ನೀಡಿದ ಶಾಸಕರು ದೌರ್ಜನ್ಯ ನಡೆಸಿದ್ದಾರೆ. ಇಷ್ಟೆಲ್ಲಾ ಆದರೂ ನ್ಯಾಯ ಸಿಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ಜಿ.ರಾಮಕೃಷ್ಣ, ಬಾಲಾಜಿ ರಾವ್, ಪ್ರಧಾನ ಕಾರ್ಯದರ್ಶಿ ಮಿನಾಕ್ಷಿ ಸುಂದರಂ, ಕಾರ್ಯದರ್ಶಿಗಳಾದ ಸಿ.ಕುಮಾರಿ, ಮಾಲಿನಿ ಮೇಸ್ತಾ, ಸಂಚಾಲಕಿ ಎಚ್.ಎಸ್.ಸುನಂದಾ, ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್, ಸಿಪಿಎಂ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಮುಖಂಡರಾದ ಸೌಮ್ಯಾ ಸಕಲೇಶಪುರ, ತುಳಸಿದೇವಿ, ಬಿ.ಹನುಮೇಶ್ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago