ಮಂಡ್ಯ

ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಮಂಡ್ಯ: ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ ಧನ್ಯವಾದ. ಮುಖ್ಯವಾಗಿ 12 ಜನ ನಿರ್ದೇಶಕರಿಗೂ ಧನ್ಯವಾದ ತಿಳಿಸಿದರು.

ಶಂಕರೇಗೌಡರು ಹಾಗೂ ಚೌಡೇಗೌಡರು ಸ್ಥಾಪಿಸಿದ ಸಂಸ್ಥೆ ಡಿ.ಸಿ.ಸಿ ಬ್ಯಾಂಕ್. ಅಲ್ಲಿಂದಲೂ ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಜೋಗಿಗೌಡರು ಸಹ ಉತ್ತಮ ಕಾರ್ಯಗಳನ್ನು ರೂಪಿಸಿಕೊಂಡು ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಸಿ.ಸಿ ಬ್ಯಾಂಕ್ ನ ಎಲ್ಲಾ ಸಿಬ್ಬಂದಿ ವರ್ಗದ ಜೊತೆ ಸಮನ್ವಯ ಸಾಧಿಸಿ ಉತ್ತಮ ಕೆಲಸ ಮಾಡಲಾಗುವುದು ಎಂದರು.

ಇದನ್ನು ಓದಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಸುಪ್ರೀಂಕೋರ್ಟ್‌ ಕದ ತಟ್ಟಿದ ಮಾಜಿ ಸಿಎಂ ಯಡಿಯೂರಪ್ಪ

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ನರೇಂದ್ರ ಸ್ವಾಮಿಯವರು ಮಾತನಾಡಿ, ಮೊದಲನೇ ಬಾರಿಗೆ ಹೆಚ್ಚಿನ ಬಹುಮತ ಪಡೆದು ಒಮ್ಮತ ನಿರ್ಧಾರಕ್ಕೆ ಬಂದು ಒಗ್ಗಟ್ಟನ್ನು ಸಾಧಿಸಿದ್ದೇವೆ. ಈ ಒಗ್ಗಟ್ಟು ಸಾಧಿಸಲು ಸಹಕಾರಿಯಾದ ಎಲ್ಲಾ ನಾಯಕರಿಗೆ ಇದರ ಕೀರ್ತಿ ಸಲ್ಲುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಸಹಕಾರಿಗಳಿಗೆ, ರೈತ ಪರ ಚಿಂತನೆಯ ಜೊತೆಗೆ ಕೈಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಡಿ.ಸಿ.ಸಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತದೆ. ಡಿ.ಸಿ.ಸಿ ಬ್ಯಾಂಕ್ ನ ನೂತನವಾಗಿ ಅಧ್ಯಕ್ಷ ಸಚಿನ್ ಹಾಗೂ ಉಪಾಧ್ಯಕ್ಷರಾದ ಚಲುವರಾಜ್ ಅವರಿಗೆ ಅಭಿನಂದನೆ ತಿಳಿಸಿದರು.

ಇದನ್ನು ಓದಿ: ಎಂಡಿಸಿಸಿಬಿ ಅಧ್ಯಕ್ಷರಾಗಿ ಸಚ್ಚಿನ್ ಆಯ್ಕೆ ಖಚಿತ

ಉಪವಿಭಾಗಾಧಿಕಾರಿ ಶಿವಮೂರ್ತಿ ಅವರು ಮಾತನಾಡಿ, ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಸಿ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚಲುವರಾಜ್ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಪರಿಶೀಲಿಸಿ ನಾಮಪತ್ರವನ್ನು ಅಂಗೀಕರಿಸಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ 5 ವರ್ಷದ ಅವಧಿ ಅಧ್ಯಕ್ಷರಾಗಿ ಸಚಿನ್ ಮಾತು ಉಪಾಧ್ಯಕ್ಷರಾಗಿ ಚೆಲುವರಾಜ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

4 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

4 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

5 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

5 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

5 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

6 hours ago