ಮಂಡ್ಯ

ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಮಂಡ್ಯ: ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ ಧನ್ಯವಾದ. ಮುಖ್ಯವಾಗಿ 12 ಜನ ನಿರ್ದೇಶಕರಿಗೂ ಧನ್ಯವಾದ ತಿಳಿಸಿದರು.

ಶಂಕರೇಗೌಡರು ಹಾಗೂ ಚೌಡೇಗೌಡರು ಸ್ಥಾಪಿಸಿದ ಸಂಸ್ಥೆ ಡಿ.ಸಿ.ಸಿ ಬ್ಯಾಂಕ್. ಅಲ್ಲಿಂದಲೂ ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಜೋಗಿಗೌಡರು ಸಹ ಉತ್ತಮ ಕಾರ್ಯಗಳನ್ನು ರೂಪಿಸಿಕೊಂಡು ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಸಿ.ಸಿ ಬ್ಯಾಂಕ್ ನ ಎಲ್ಲಾ ಸಿಬ್ಬಂದಿ ವರ್ಗದ ಜೊತೆ ಸಮನ್ವಯ ಸಾಧಿಸಿ ಉತ್ತಮ ಕೆಲಸ ಮಾಡಲಾಗುವುದು ಎಂದರು.

ಇದನ್ನು ಓದಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಸುಪ್ರೀಂಕೋರ್ಟ್‌ ಕದ ತಟ್ಟಿದ ಮಾಜಿ ಸಿಎಂ ಯಡಿಯೂರಪ್ಪ

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ನರೇಂದ್ರ ಸ್ವಾಮಿಯವರು ಮಾತನಾಡಿ, ಮೊದಲನೇ ಬಾರಿಗೆ ಹೆಚ್ಚಿನ ಬಹುಮತ ಪಡೆದು ಒಮ್ಮತ ನಿರ್ಧಾರಕ್ಕೆ ಬಂದು ಒಗ್ಗಟ್ಟನ್ನು ಸಾಧಿಸಿದ್ದೇವೆ. ಈ ಒಗ್ಗಟ್ಟು ಸಾಧಿಸಲು ಸಹಕಾರಿಯಾದ ಎಲ್ಲಾ ನಾಯಕರಿಗೆ ಇದರ ಕೀರ್ತಿ ಸಲ್ಲುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಸಹಕಾರಿಗಳಿಗೆ, ರೈತ ಪರ ಚಿಂತನೆಯ ಜೊತೆಗೆ ಕೈಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಡಿ.ಸಿ.ಸಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತದೆ. ಡಿ.ಸಿ.ಸಿ ಬ್ಯಾಂಕ್ ನ ನೂತನವಾಗಿ ಅಧ್ಯಕ್ಷ ಸಚಿನ್ ಹಾಗೂ ಉಪಾಧ್ಯಕ್ಷರಾದ ಚಲುವರಾಜ್ ಅವರಿಗೆ ಅಭಿನಂದನೆ ತಿಳಿಸಿದರು.

ಇದನ್ನು ಓದಿ: ಎಂಡಿಸಿಸಿಬಿ ಅಧ್ಯಕ್ಷರಾಗಿ ಸಚ್ಚಿನ್ ಆಯ್ಕೆ ಖಚಿತ

ಉಪವಿಭಾಗಾಧಿಕಾರಿ ಶಿವಮೂರ್ತಿ ಅವರು ಮಾತನಾಡಿ, ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಸಿ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚಲುವರಾಜ್ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಪರಿಶೀಲಿಸಿ ನಾಮಪತ್ರವನ್ನು ಅಂಗೀಕರಿಸಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ 5 ವರ್ಷದ ಅವಧಿ ಅಧ್ಯಕ್ಷರಾಗಿ ಸಚಿನ್ ಮಾತು ಉಪಾಧ್ಯಕ್ಷರಾಗಿ ಚೆಲುವರಾಜ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

53 mins ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

1 hour ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

1 hour ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

4 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

7 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

7 hours ago