ಮಂಡ್ಯ

ನ.25ರಿಂದ 27ರವರೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ಸಹಸ್ರ ಕಳಶಾಭಿಷೇಕ ಮಹೋತ್ಸವ

ಮಂಡ್ಯ: ಇದೇ ನವೆಂಬರ್.25 ರಿಂದ 27ರವರೆಗೆ ಶ್ರೀ ರಂಗನಾಥಸ್ವಾಮಿ ಸಹಸ್ರ ಕಳಶಾಭಿಷೇಕ ಮಹೋತ್ಸವ ಕಾರ್ಯಕ್ರಮದ ನಡೆಯಲ್ಲಿದ್ದು, ಈ ಸಂಬಂಧ ಅಗತ್ಯ‌ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಶ್ರೀರಂಗಪಟ್ಟಣ ಶಾಸಕರಾದ ಎ.ಬಿ.ರಮೇಶ ಬಂಡಿ ಸಿದ್ದೇಗೌಡ ಅವರು ಸೂಚನೆ ನೀಡಿದರು.

ಇಂದು ಶ್ರೀ ರಂಗಪಟ್ಟಣದ‌ ಶ್ರೀ ರಂಗನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಯಾವುದೇ ಲೋಪ ದೋಷಗಳು ಇಲ್ಲದಂತೆ ಕ್ರಮಬದ್ಧವಾಗಿ ಹಾಗೂ ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನಡೆಯುವಂತೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದ ಅವರು ಮೂರು ದಿನಗಳ ಕಾಲ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಸ್ಧಳದಲ್ಲಿ ಆಂಬುಲೆನ್ಸ್ ಹಾಗೂ ವೈದ್ಯರ ತಂಡ ನಿಯೋಜಿಸುವಂತೆ ಹಾಗೂ ಕಾರ್ಯಕ್ರಮದ ಹೆಚ್ಚಿನ ಪ್ರಚಾರಕ್ಕಾಗಿ ಕಾರ್ಯಕ್ರಮ ಕುರಿತ ಕರಪತ್ರಗಳನ್ನು ಮುದ್ರಿಸಿ ಹಂಚುವುದು ಹಾಗೂ ಆಟೋ ಮೂಲಕ ಪ್ರಚಾರ ಮಾಡುವಂತೆ ಶಾಸಕರು ತಿಳಿಸಿದರು. ದೇವಾಲಯದ ಒಳ ಮತ್ತು ಹೊರಭಾಗದಲ್ಲಿ ತಳಿರು ತೋರಣಗಳಿಂದ ಸಿಂಗಾರ ವ್ಯವಸ್ಥೆ ಹಾಗೂ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ವ್ಯವಸ್ಥೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಇದನ್ನು ಓದಿ: ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಬಿರ್ಸಾ ಮುಂಡ: ಸಿಇಓ ನಂದಿನಿ

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ ಕುಮಾರ ಅವರು, ಮಹೋತ್ಸವ ವ್ಯವಸ್ಥಿತವಾಗಿ ಒಳ ಮತ್ತು ಹೊರಾಂಗಣದಲ್ಲಿ ಆಯ್ದ ಸ್ಥಳಗಳಲ್ಲಿ ಶಾಮಿಯಾನ, ಕುರ್ಚಿ ಹಾಗೂ ಡಯಾಸ್ ವ್ಯವಸ್ಥೆ ಹಾಗೂ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಹೋತ್ಸವಕ್ಕೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ, ಸ್ವಚ್ಚತೆ ಹಾಗೂ ನೈರ್ಮಲ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಮಹೋತ್ಸವಕ್ಕೆ ಆಗಮಿಸಿರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸುವುದು ಹಾಗೂ ಭದ್ರತಾ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಹಾಗೂ ಸಂಗೀತೋತ್ಸವ ವ್ಯವಸ್ಥೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ಚೇತನಾ ಯಾದವ್, ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೇಣು, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಶ್ರೀ ರಂಗನಾಥಸ್ವಾಮಿ ಪ್ರಧಾನ ಅರ್ಚಕರಾದ ಎಲ್.ವಿಜಯಸಾರಥಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

3 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

3 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

3 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

3 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

3 hours ago