ಮಂಡ್ಯ

ನ.25ರಿಂದ 27ರವರೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ಸಹಸ್ರ ಕಳಶಾಭಿಷೇಕ ಮಹೋತ್ಸವ

ಮಂಡ್ಯ: ಇದೇ ನವೆಂಬರ್.25 ರಿಂದ 27ರವರೆಗೆ ಶ್ರೀ ರಂಗನಾಥಸ್ವಾಮಿ ಸಹಸ್ರ ಕಳಶಾಭಿಷೇಕ ಮಹೋತ್ಸವ ಕಾರ್ಯಕ್ರಮದ ನಡೆಯಲ್ಲಿದ್ದು, ಈ ಸಂಬಂಧ ಅಗತ್ಯ‌ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಶ್ರೀರಂಗಪಟ್ಟಣ ಶಾಸಕರಾದ ಎ.ಬಿ.ರಮೇಶ ಬಂಡಿ ಸಿದ್ದೇಗೌಡ ಅವರು ಸೂಚನೆ ನೀಡಿದರು.

ಇಂದು ಶ್ರೀ ರಂಗಪಟ್ಟಣದ‌ ಶ್ರೀ ರಂಗನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಯಾವುದೇ ಲೋಪ ದೋಷಗಳು ಇಲ್ಲದಂತೆ ಕ್ರಮಬದ್ಧವಾಗಿ ಹಾಗೂ ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನಡೆಯುವಂತೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದ ಅವರು ಮೂರು ದಿನಗಳ ಕಾಲ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಸ್ಧಳದಲ್ಲಿ ಆಂಬುಲೆನ್ಸ್ ಹಾಗೂ ವೈದ್ಯರ ತಂಡ ನಿಯೋಜಿಸುವಂತೆ ಹಾಗೂ ಕಾರ್ಯಕ್ರಮದ ಹೆಚ್ಚಿನ ಪ್ರಚಾರಕ್ಕಾಗಿ ಕಾರ್ಯಕ್ರಮ ಕುರಿತ ಕರಪತ್ರಗಳನ್ನು ಮುದ್ರಿಸಿ ಹಂಚುವುದು ಹಾಗೂ ಆಟೋ ಮೂಲಕ ಪ್ರಚಾರ ಮಾಡುವಂತೆ ಶಾಸಕರು ತಿಳಿಸಿದರು. ದೇವಾಲಯದ ಒಳ ಮತ್ತು ಹೊರಭಾಗದಲ್ಲಿ ತಳಿರು ತೋರಣಗಳಿಂದ ಸಿಂಗಾರ ವ್ಯವಸ್ಥೆ ಹಾಗೂ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ವ್ಯವಸ್ಥೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಇದನ್ನು ಓದಿ: ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಬಿರ್ಸಾ ಮುಂಡ: ಸಿಇಓ ನಂದಿನಿ

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ ಕುಮಾರ ಅವರು, ಮಹೋತ್ಸವ ವ್ಯವಸ್ಥಿತವಾಗಿ ಒಳ ಮತ್ತು ಹೊರಾಂಗಣದಲ್ಲಿ ಆಯ್ದ ಸ್ಥಳಗಳಲ್ಲಿ ಶಾಮಿಯಾನ, ಕುರ್ಚಿ ಹಾಗೂ ಡಯಾಸ್ ವ್ಯವಸ್ಥೆ ಹಾಗೂ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಹೋತ್ಸವಕ್ಕೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ, ಸ್ವಚ್ಚತೆ ಹಾಗೂ ನೈರ್ಮಲ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಮಹೋತ್ಸವಕ್ಕೆ ಆಗಮಿಸಿರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸುವುದು ಹಾಗೂ ಭದ್ರತಾ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಹಾಗೂ ಸಂಗೀತೋತ್ಸವ ವ್ಯವಸ್ಥೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ಚೇತನಾ ಯಾದವ್, ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೇಣು, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಶ್ರೀ ರಂಗನಾಥಸ್ವಾಮಿ ಪ್ರಧಾನ ಅರ್ಚಕರಾದ ಎಲ್.ವಿಜಯಸಾರಥಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago