ಮಂಡ್ಯ

ನ.25ರಿಂದ 27ರವರೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ಸಹಸ್ರ ಕಳಶಾಭಿಷೇಕ ಮಹೋತ್ಸವ

ಮಂಡ್ಯ: ಇದೇ ನವೆಂಬರ್.25 ರಿಂದ 27ರವರೆಗೆ ಶ್ರೀ ರಂಗನಾಥಸ್ವಾಮಿ ಸಹಸ್ರ ಕಳಶಾಭಿಷೇಕ ಮಹೋತ್ಸವ ಕಾರ್ಯಕ್ರಮದ ನಡೆಯಲ್ಲಿದ್ದು, ಈ ಸಂಬಂಧ ಅಗತ್ಯ‌ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಶ್ರೀರಂಗಪಟ್ಟಣ ಶಾಸಕರಾದ ಎ.ಬಿ.ರಮೇಶ ಬಂಡಿ ಸಿದ್ದೇಗೌಡ ಅವರು ಸೂಚನೆ ನೀಡಿದರು.

ಇಂದು ಶ್ರೀ ರಂಗಪಟ್ಟಣದ‌ ಶ್ರೀ ರಂಗನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಯಾವುದೇ ಲೋಪ ದೋಷಗಳು ಇಲ್ಲದಂತೆ ಕ್ರಮಬದ್ಧವಾಗಿ ಹಾಗೂ ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನಡೆಯುವಂತೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದ ಅವರು ಮೂರು ದಿನಗಳ ಕಾಲ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಸ್ಧಳದಲ್ಲಿ ಆಂಬುಲೆನ್ಸ್ ಹಾಗೂ ವೈದ್ಯರ ತಂಡ ನಿಯೋಜಿಸುವಂತೆ ಹಾಗೂ ಕಾರ್ಯಕ್ರಮದ ಹೆಚ್ಚಿನ ಪ್ರಚಾರಕ್ಕಾಗಿ ಕಾರ್ಯಕ್ರಮ ಕುರಿತ ಕರಪತ್ರಗಳನ್ನು ಮುದ್ರಿಸಿ ಹಂಚುವುದು ಹಾಗೂ ಆಟೋ ಮೂಲಕ ಪ್ರಚಾರ ಮಾಡುವಂತೆ ಶಾಸಕರು ತಿಳಿಸಿದರು. ದೇವಾಲಯದ ಒಳ ಮತ್ತು ಹೊರಭಾಗದಲ್ಲಿ ತಳಿರು ತೋರಣಗಳಿಂದ ಸಿಂಗಾರ ವ್ಯವಸ್ಥೆ ಹಾಗೂ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ವ್ಯವಸ್ಥೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಇದನ್ನು ಓದಿ: ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಬಿರ್ಸಾ ಮುಂಡ: ಸಿಇಓ ನಂದಿನಿ

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ ಕುಮಾರ ಅವರು, ಮಹೋತ್ಸವ ವ್ಯವಸ್ಥಿತವಾಗಿ ಒಳ ಮತ್ತು ಹೊರಾಂಗಣದಲ್ಲಿ ಆಯ್ದ ಸ್ಥಳಗಳಲ್ಲಿ ಶಾಮಿಯಾನ, ಕುರ್ಚಿ ಹಾಗೂ ಡಯಾಸ್ ವ್ಯವಸ್ಥೆ ಹಾಗೂ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಹೋತ್ಸವಕ್ಕೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ, ಸ್ವಚ್ಚತೆ ಹಾಗೂ ನೈರ್ಮಲ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಮಹೋತ್ಸವಕ್ಕೆ ಆಗಮಿಸಿರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸುವುದು ಹಾಗೂ ಭದ್ರತಾ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಹಾಗೂ ಸಂಗೀತೋತ್ಸವ ವ್ಯವಸ್ಥೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ಚೇತನಾ ಯಾದವ್, ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೇಣು, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಶ್ರೀ ರಂಗನಾಥಸ್ವಾಮಿ ಪ್ರಧಾನ ಅರ್ಚಕರಾದ ಎಲ್.ವಿಜಯಸಾರಥಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

13 hours ago