ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಹೆಮ್ಮೆ ಡಾ.ಎಂ.ಹೆಚ್.ಅಂಬರೀಶ್ ಹಾಗೂ ನಿತ್ಯ ಸಚಿವ ಕೆ.ವಿ.ಶಂಕರಗೌಡರ ಭಾವಚಿತ್ರಗಳನ್ನು ಬಳಸಬೇಕು ಎಂದು ಅಖಿಲ ಕರ್ನಾಟಕ ಧರ್ಮರಾಯ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಕಾಚೋವಳ್ಳಿ ನಂಜೇಗೌಡ ತಿಳಿಸಿದರು.
ಸುದ್ದಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಎಂ.ಹೆಚ್.ಅಂಬರೀಶ್ ಹಾಗೂ ನಿತ್ಯ ಸಚಿವ ಕೆ.ವಿ.ಶಂಕರಗೌಡ ಅವರು ರಾಜಕೀಯ ಹೊರತು ಪಡಿಸಿ ಜಿಲ್ಲೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರನ್ನು ಸಮ್ಮೇಳನದ ಸಂದರ್ಭದಲ್ಲಿ ನೆನೆಯುವುದು ಮುಖ್ಯ ಎಂದರು.
ಈ ಸಂಬಂಧ ಸರ್ಕಾರವಾಗಲಿ, ಸಾಹಿತ್ಯ ಪರಿಷತ್ತಿನ ಸಮಿತಿಗಳಾಗಲಿ ಅವರು ನೀಡುವ ಜಾಹಿರಾತು, ಭಿತ್ತಿಪತ್ರ, ಆಹ್ವಾನ ಹಾಗೂ ಪ್ರಚಾರದ ಪ್ರತಿಗಳಲ್ಲಿ ಬಳಸದೇ ಇರುವುದು ವಿಷಾದನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕಲಾಸೇವೆ ನೀಡಿ, ಮಂಡ್ಯ ಎಂದರೆ ಇಂಡಿಯಾ ಎನ್ನುವ ಮಟ್ಟಕ್ಕೆ ಕೊಂಡೊಯ್ದ ಮಹಾನ್ ಚೇತನ ಅಂಬರೀಶ್ ಮತ್ತು ಜಿಲ್ಲೆಯನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸಿ, ಕಲೆ ಹಾಗೂ ರೈತರ ಧ್ವನಿಯಾಗಿದ್ದ ಕೆ.ವಿ.ಶಂಕರಗೌಡ ಅವರ ಭಾವಚಿತ್ರವನ್ನು ಸಮ್ಮೇಳನ ಸಂಬಂಧಿತ ವಿಷಯಗಳನ್ನು ಬಳಸಬೇಕು. ಹಾಗೆಯೇ ಸಮ್ಮೇಳನದ ಯಾವುದಾದರೂ ದ್ವಾರಕ್ಕೆ ಅಂಬರೀಶ್ ಅವರ ಹೆಸರನ್ನು ಇಡುವಂತೆ ಒತ್ತಾಯ ಪೂರ್ವಕ ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಗೌಡ, ಕುಮಾರ್, ಶಿವರಾಜ್ ಗೌಡ, ಸ್ವಾಮಿಗೌಡ, ವರದರಾಜು ಉಪಸ್ಥಿತರಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…