ಮಂಡ್ಯ

ಸಾಹಿತ್ಯ ಸಮ್ಮೇಳನ: ವಿದ್ಯಾರ್ಥಿಗಳು ಗೋಷ್ಠಿಗಳಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಕರೆ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 3 ದಶಕಗಳ ನಂತರ ಜಿಲ್ಲೆಯಲ್ಲಿ ನಡೆಯುತ್ತಿದೆ. ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಡಿಸೆಂಬರ್ 20, 21 ಹಾಗೂ 22 ರಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಅವರು ಇಂದು(ಡಿ.5) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದರು.

ಡಿಸೆಂಬರ್ 20 ರಂದು ಬೆಳಿಗ್ಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳ ಕಲಾತಂಡಗಳು ಭಾಗವಹಿಸಲಿದೆ. ಇಲ್ಲಿ ಮಕ್ಕಳಿಗೆ ವಿವಿಧ ಕಲಾ ಪ್ರಕಾರಗಳನ್ನು ನೋಡುವ ಅವಕಾಶ ಸಿಗಲಿದೆ. ಈ ಅಪರೂಪ ಹಾಗೂ ಅವಿಸ್ಮರಣೀಯ ಅವಕಾಶವನ್ನು ವಿದ್ಯಾರ್ಥಿಗಳು ಕಳೆದುಕೊಳ್ಳಬಾರದು. ವಿದ್ಯಾರ್ಥಿಗಳನ್ನು ಶಿಕ್ಷಕರು ಕರೆತಂದು ಮೆರವಣಿಗೆ ಸಾಗುವ ಎರಡು ಬದಿಯಲ್ಲಿ ಕುಳಿತುಕೊಂಡು ವೀಕ್ಷಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದಕ್ಕೆ ಯೋಜನೆ ರೂಪಿಸಬೇಕು ಎಂದರು.

ಮೂರು ದಿನಗಳು ನಡೆಯುವ ಸಮ್ಮೇಳನದಲ್ಲಿ ಸಂಪನ್ಮೂಲ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹೆಸರಾಂತ ವ್ಯಕ್ತಿಗಳಿಂದ ಮೂರು ವೇದಿಕೆಗಳಲ್ಲಿ ಗೋಷ್ಠಗಳು ನಡೆಯಲಿದೆ. ಗೋಷ್ಠಿಗಳು ವಿದ್ಯಾರ್ಥಿಗಳಿಗೆ ಜ್ಞಾನದ ಭಂಡಾರ. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳವೇಕು. ಶುಕ್ರವಾರ ಮತ್ತು ಶನಿವಾರದ ಪಠ್ಯ ಚಟುವಟಿಕೆಗಳನ್ನು ಮುಂದಿನ ರಜೆ ದಿನಗಳೊಂದು ಸರಿದೂಗಿಸಿಕೊಳ್ಳಿ ಎಂದರು.

ಪ್ರತಿ ದಿನ ರಾತ್ರಿ 7 ಗಂಟೆಯಿಂದ ಸಾಂಸ್ಕೃತಿಕ ‌ಕಾರ್ಯಕ್ರಮಗಳು ಸಹ ಇರುತ್ತದೆ. ಬೆಳಗಿನ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಸಹ ಇರುತ್ತಣೆ. ಸಮ್ಮೇಳನದ ದಿನಗಳಂದು ಮಕ್ಕಳನ್ನು ಸುರಕ್ಷಿತವಾಗಿ ಕರೆತಂದು, ಕರೆದುಕೊಂಡು ಹೋಗುವ ಜವಾಬ್ದಾರಿ ಶಿಕ್ಷಕರ ಮೇಲೆ ಇರುತ್ತದೆ.

ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಮುಖ್ಯ ಆಕರ್ಷಣೆ ಎಂದರೆ ಪುಸ್ತಕ ಮಳಿಗೆಗಳು. ಮಕ್ಕಳನ್ನು ಕರೆ ತರುವ ಮೊದಲು ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸದ ಬಗ್ಗೆ ತಿಳಿಸಿ. ಇದರಿಂದ ಮಕ್ಕಳು ಪುಸ್ತಕಗಳನ್ನು ಖರೀದಿಸಿ ಓದುವ ಮನೋಭಾವನೆ ಬೆಳಸಿಕೊಳ್ಳುತ್ತಾರೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್  ಮಾತನಾಡಿ, ಮಂಡ್ಯ ಜಿಲ್ಲೆಯ ಜನರು ಪ್ರೀತಿ ವಿಶ್ವಾಸದಲ್ಲಿ ಮೇಲುಗೈ ಸಾಧಿಸಿದವರು. ಅತಿ ಹೆಚ್ಚು ಕನ್ನಡ ಮಾತನಾಡುವ ಜನರು ಮಂಡ್ಯದಲ್ಲಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮುಂದಿನ ಪೀಳಿಗೆಯವರಿಗೂ ಕೂಡ ಮಾರ್ಗದರ್ಶನವಾಗುವ ರೀತಿಯಲ್ಲಿ ಇರಬೇಕು. ಪ್ರತಿಯೊಬ್ಬರೂ ಕೂಡ ನಮ್ಮ ಮನೆಗಳ ಹಬ್ಬವೆನ್ನುವಂತೆ ಭಾಗವಹಿಸಬೇಕು ಎಂದು ತಿಳಿಸಿದರು.

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕರಾದ ಡಾ: ಮೀರಾ ಶಿವಲಿಂಗಯ್ಯ ಅವರು ಮಾತನಾಡಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದಿನ ಪೀಳಿಗೆಗೆ ಒಂದು ಮಾರ್ಗ ದರ್ಶನವಾಗಿರಬೇಕು ಮತ್ತು ಪ್ರತಿಯೊಬ್ಬರ ಸವಿ ನೆನಪಿನಲ್ಲಿ ಉಳಿಯುತ್ತದೆ.

ಕನ್ನಡದ ಸೇವೆಗಾಗಿ ಶಿಕ್ಷಕರು ತಮ್ಮ ಒಂದು ದಿನದ ಸಂಬಳ ನೀಡುತ್ತಿರುವುದು ಸಂತಸದ ಸಂಗತಿ, ಕರ್ನಾಟಕದಲ್ಲಿ ಮೊದಲು ಕನ್ನಡ ಎಂ.ಎ ಪದವಿ ಪಡೆದ ರಾ.ನರಸಿಂಹ ಚಾರ್ಯ ಅವರು ಸಹ ಮಂಡ್ಯ ಜಿಲ್ಲೆಯವರು ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ತಿಳಿಸಿದರು.

ಸಾವಿರಾರು ಸಂಖ್ಯೆಯಲ್ಲಿ ನೀವೆಲ್ಲರೂ ಭಾಗವಹಿಸಿ ಸಮ್ಮೇಳನವನ್ನ ಯಶಸ್ವಿಗೊಳಿಸಬೇಕು ಎಂದರು. ವಿದ್ಯಾರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ ಸಮ್ಮೇಳನದಲ್ಲಿ ಭಾಗವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಹೆಚ್ ಶಿವರಾಮೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಚೆಲುವಯ್ಯ, ಸೇರಿದಂತೆ ಇನ್ನಿತರ ಶಾಲಾ ಮುಖ್ಯ ಶಿಕ್ಷಕರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago