ಮಂಡ್ಯ

ಸಾಹಿತ್ಯ ಸಮ್ಮೇಳನ | ಖರ್ಚು ವೆಚ್ಚದ ಲೆಕ್ಕ ನೀಡುವಂತೆ ಆಗ್ರಹ

ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದು ಮೂರು ತಿಂಗಳಾದರೂ ಅದರ ಖರ್ಚು ವೆಚ್ಚದ ಲೆಕ್ಕ ನೀಡದೇ ಇದ್ದು ಕೂಡಲೇ ಲೆಕ್ಕಪತ್ರವನ್ನು ಸಾರ್ವತ್ರಿಕವಾಗಿ ಬಹಿರಂಗ ಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಠಿಯಿಂದ ಜನತೆಯ ಮುಂದಿಡುವುದು ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜವಾಬ್ದಾರಿಯಾಗಿದೆ ಎಂದರು.

ಸಮ್ಮೇಳನಕ್ಕೆ ಸರ್ಕಾರದಿಂದಲೇ ಕೋಟಿಗಟ್ಟಲೆ ಹಣ ನೀಡಲಾಗಿದೆ. ಸಮಿತಿಗಳನ್ನು ರಚಿಸಿ ಹಣ ಹಂಚಲಾಗಿದ್ದು, ಗಣಕೀಕೃತ ಸಹಾಯವಿರುವ ಕಾಲದಲ್ಲಿ ಲೆಕ್ಕಪತ್ರ ನೀಡಲು ಮೂರು ತಿಂಗಳು ಬೇಕೆ ಎಂದು ಪ್ರಶ್ನಿಸಿದ ಅವರು, ಸಮ್ಮೇಳನಾಪೂರ್ವದಲ್ಲಿಯೇ ಸೋಷಿಯಲ್ ಆಡಿಟಿಂಗ್ ಮಾಡಲು ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. ಸಮ್ಮೇಳನದ ತಿಂಗಳ ನಂತರ ಲೆಕ್ಕಪತ್ರ ಬಹಿರಂಗ ಪಡಿಸಲು ಕೋರಲಾಯಿತು. ಆಗ ಒಂದು ತಿಂಗಳ ಕಾಲಾವಕಾಶ ಕೇಳಿದ ಜಿಲ್ಲಾಧಿಕಾರಿಗಳು ೪೫ ದಿನ ಕಳೆದರೂ ಸಮ್ಮೇಳನದ ಲೆಕ್ಕಪತ್ರಗಳನ್ನು ಜನರ ಮುಂದಿರಿಸಿಲ್ಲ ಎಂದು ದೂಡಿದರು.

ಕಂಪ್ಯೂಟರ್‌ಗಳ ಹೆಚ್ಚು ಬಳಕೆಯಿಲ್ಲದ ೧೯೯೪ರಲ್ಲಿ ನಡೆದ ಸಮ್ಮೇಳನದ ಲೆಕ್ಕಪತ್ರವನ್ನು ಒಂದು ತಿಂಗಳಲ್ಲಿಯೇ ನೀಡಲಾಗಿತ್ತು. ಹಾವೇರಿಯಲ್ಲಿ ನಡೆದ ೮೬ನೇ ಸಮ್ಮೇಳನದ ಲೆಕ್ಕಪತ್ರವನ್ನೂ ಒಂದು ತಿಂಗಳಲ್ಲೇ ನೀಡಲಾಯಿತು. ಜಿಲ್ಲೆಯಲ್ಲಿ ನಡೆದ ಸಮ್ಮೇಳನದ ಲೆಕ್ಕಪತ್ರ ನೀಡಲು ವಿಳಂಬ ಮಾಡುತ್ತಿರುವುದರಿಂದೆ ಇರುವ ಮರ್ಮವೇನು ಎಂದು ಪ್ರಶ್ನಿಸಿದರು.

ಲೆಕ್ಕ ಪತ್ರ ಬಹಿರಂಗ ಪಡಿಸಲು ಜಿಲ್ಲಾಡಳಿತಕ್ಕೆ ಈಗಾಗಲೇ ೩ಬಾರಿ ಲಿಖಿತ ಮನವಿ ಮಾಡಿದ್ದು, ಇದುವರೆಗೂ ಲೆಕ್ಕಪತ್ರ ಬಹಿರಂಗ ಪಡಿಸಲಾಗಿಲ್ಲ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಸಾರ್ವಜನಿಕ ಲೆಕ್ಕ ಕೊಡದಿದ್ದರೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಸಮ್ಮೇಳನ ನಡೆದು ಮೂರು ತಿಂಗಳುಗಳಾಗಿದ್ದು, ದೊಡ್ಡ ಮೊತ್ತದ ಲೆಕ್ಕ ಜನರ ಮುಂದಿಡಬೇಕಾದ ಜವಾಬ್ದಾರಿ ಕಸಾಪ ಮತ್ತು ಜಿಲ್ಲಾಡಳಿತದ್ದಾಗಿದೆ. ಒಂದು ವಾರದೊಳಗೆ ಲೆಕ್ಕವನ್ನು ಸಾರ್ವಜನಿಕರ ಮುಂದಿಡದೇ ಇದ್ದರೆ ರಾಜ್ಯಾದ್ಯಂತ ಲೆಕ್ಕ ಕೊಡಿ ಚಳುವಳಿ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಪ್ರೊ.ಜಿ.ಟಿ.ವೀರಪ್ಪ, ಜಿ.ಸಂತೋಷ್, ರಾಜೇಂದ್ರ ಬಾಬು, ಅರವಿಂದಪ್ರಭು, ಹೆಚ್.ಡಿ.ಜಯರಾಂ, ಸಿ.ಕುಮಾರಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

12 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago