ಮಂಡ್ಯ

ಸಾಹಿತ್ಯ ಸಮ್ಮೇಳನ | ಖರ್ಚು ವೆಚ್ಚದ ಲೆಕ್ಕ ನೀಡುವಂತೆ ಆಗ್ರಹ

ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದು ಮೂರು ತಿಂಗಳಾದರೂ ಅದರ ಖರ್ಚು ವೆಚ್ಚದ ಲೆಕ್ಕ ನೀಡದೇ ಇದ್ದು ಕೂಡಲೇ ಲೆಕ್ಕಪತ್ರವನ್ನು ಸಾರ್ವತ್ರಿಕವಾಗಿ ಬಹಿರಂಗ ಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಠಿಯಿಂದ ಜನತೆಯ ಮುಂದಿಡುವುದು ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜವಾಬ್ದಾರಿಯಾಗಿದೆ ಎಂದರು.

ಸಮ್ಮೇಳನಕ್ಕೆ ಸರ್ಕಾರದಿಂದಲೇ ಕೋಟಿಗಟ್ಟಲೆ ಹಣ ನೀಡಲಾಗಿದೆ. ಸಮಿತಿಗಳನ್ನು ರಚಿಸಿ ಹಣ ಹಂಚಲಾಗಿದ್ದು, ಗಣಕೀಕೃತ ಸಹಾಯವಿರುವ ಕಾಲದಲ್ಲಿ ಲೆಕ್ಕಪತ್ರ ನೀಡಲು ಮೂರು ತಿಂಗಳು ಬೇಕೆ ಎಂದು ಪ್ರಶ್ನಿಸಿದ ಅವರು, ಸಮ್ಮೇಳನಾಪೂರ್ವದಲ್ಲಿಯೇ ಸೋಷಿಯಲ್ ಆಡಿಟಿಂಗ್ ಮಾಡಲು ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. ಸಮ್ಮೇಳನದ ತಿಂಗಳ ನಂತರ ಲೆಕ್ಕಪತ್ರ ಬಹಿರಂಗ ಪಡಿಸಲು ಕೋರಲಾಯಿತು. ಆಗ ಒಂದು ತಿಂಗಳ ಕಾಲಾವಕಾಶ ಕೇಳಿದ ಜಿಲ್ಲಾಧಿಕಾರಿಗಳು ೪೫ ದಿನ ಕಳೆದರೂ ಸಮ್ಮೇಳನದ ಲೆಕ್ಕಪತ್ರಗಳನ್ನು ಜನರ ಮುಂದಿರಿಸಿಲ್ಲ ಎಂದು ದೂಡಿದರು.

ಕಂಪ್ಯೂಟರ್‌ಗಳ ಹೆಚ್ಚು ಬಳಕೆಯಿಲ್ಲದ ೧೯೯೪ರಲ್ಲಿ ನಡೆದ ಸಮ್ಮೇಳನದ ಲೆಕ್ಕಪತ್ರವನ್ನು ಒಂದು ತಿಂಗಳಲ್ಲಿಯೇ ನೀಡಲಾಗಿತ್ತು. ಹಾವೇರಿಯಲ್ಲಿ ನಡೆದ ೮೬ನೇ ಸಮ್ಮೇಳನದ ಲೆಕ್ಕಪತ್ರವನ್ನೂ ಒಂದು ತಿಂಗಳಲ್ಲೇ ನೀಡಲಾಯಿತು. ಜಿಲ್ಲೆಯಲ್ಲಿ ನಡೆದ ಸಮ್ಮೇಳನದ ಲೆಕ್ಕಪತ್ರ ನೀಡಲು ವಿಳಂಬ ಮಾಡುತ್ತಿರುವುದರಿಂದೆ ಇರುವ ಮರ್ಮವೇನು ಎಂದು ಪ್ರಶ್ನಿಸಿದರು.

ಲೆಕ್ಕ ಪತ್ರ ಬಹಿರಂಗ ಪಡಿಸಲು ಜಿಲ್ಲಾಡಳಿತಕ್ಕೆ ಈಗಾಗಲೇ ೩ಬಾರಿ ಲಿಖಿತ ಮನವಿ ಮಾಡಿದ್ದು, ಇದುವರೆಗೂ ಲೆಕ್ಕಪತ್ರ ಬಹಿರಂಗ ಪಡಿಸಲಾಗಿಲ್ಲ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಸಾರ್ವಜನಿಕ ಲೆಕ್ಕ ಕೊಡದಿದ್ದರೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಸಮ್ಮೇಳನ ನಡೆದು ಮೂರು ತಿಂಗಳುಗಳಾಗಿದ್ದು, ದೊಡ್ಡ ಮೊತ್ತದ ಲೆಕ್ಕ ಜನರ ಮುಂದಿಡಬೇಕಾದ ಜವಾಬ್ದಾರಿ ಕಸಾಪ ಮತ್ತು ಜಿಲ್ಲಾಡಳಿತದ್ದಾಗಿದೆ. ಒಂದು ವಾರದೊಳಗೆ ಲೆಕ್ಕವನ್ನು ಸಾರ್ವಜನಿಕರ ಮುಂದಿಡದೇ ಇದ್ದರೆ ರಾಜ್ಯಾದ್ಯಂತ ಲೆಕ್ಕ ಕೊಡಿ ಚಳುವಳಿ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಪ್ರೊ.ಜಿ.ಟಿ.ವೀರಪ್ಪ, ಜಿ.ಸಂತೋಷ್, ರಾಜೇಂದ್ರ ಬಾಬು, ಅರವಿಂದಪ್ರಭು, ಹೆಚ್.ಡಿ.ಜಯರಾಂ, ಸಿ.ಕುಮಾರಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

4 mins ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

8 mins ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

12 mins ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

2 hours ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

2 hours ago

ಓದುಗರ ಪತ್ರ: ಎಥೆನಾಲ್: ಪ್ರಚಾರದ ಗಿಮಿಕ್ಕೋ?

ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್‌ನಂತೆ ಕಾಣುತ್ತಿದೆ. ಪೆಟ್ರೋಲ್‌ಗೆ ಶೇ.೨೦ ಮಿಶ್ರಣದ ಗುರಿ ಮತ್ತು…

2 hours ago