ಮಂಡ್ಯ

ಸಾಹಿತ್ಯ ಸಮ್ಮೇಳನ: ವಿವಿಧ ಸಮಿತಿಗಳು ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಲಿ: ಡಿಸಿ. ಕುಮಾರ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – 2024 ಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ಸಮಿತಿಗಳ ಸಭೆ ನಡೆಸುತ್ತಿದ್ದು, ಪ್ರತಿ ಸಮಿತಿಗಳು ಕೂಡ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಮೂಲಕ ಸಮ್ಮೇಳನಕ್ಕೆ ಕೈಜೋಡಿಸಿ ಎಂದು ಡಾ ಕುಮಾರ ಅವರು ತಿಳಿಸಿದರು.

ಅವರು ಶುಕ್ರವಾರ(ಆ.24) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – 2024 ಕ್ಕೆ ಸಂಬಂಧಿಸಿದಂತೆ ವಿವಿಧ ಸಮಿತಿಗಳ ಸಭೆ ನಡೆಸಿ ಮಾತನಾಡಿದರು.

ವಸತಿ ಸಮಿತಿ
ವಸತಿ ಸಮಿತಿಯು ಸಮ್ಮೇಳನಕ್ಕೆ ಬರುವ ಗಣ್ಯರಿಗೆ, ಘೋಷ್ಠಿಗೆ ಬರುವವರಿಗೆ, ನೋಂದಣಿ ಸಮಿತಿಯಲ್ಲಿ ನೋಂದಣಿ ಮಾಡಿಸುವವರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಆದಕಾರಣ ಜಿಲ್ಲೆಯಲ್ಲಿರುವ ಹೋಟೆಲ್, ಸಮುದಾಯ ಭವನ, ವಿಶ್ವವಿದ್ಯಾನಿಲಯ, ಹಾಸ್ಟೆಲ್, ಹೋಮ್ ಸ್ಟೇ, ರೆಸಾರ್ಟ್, ವಸತಿ ಕಲ್ಪಿಸಲು ಪತ್ರ ವ್ಯವಹಾರ ನಡೆಸಿ ಈಗಲೇ ಬುಕ್ ಮಾಡುವ ಕಾರ್ಯವಾಗಬೇಕು. ಮದ್ದೂರು, ಶ್ರೀರಂಗಪಟ್ಟಣ ತಾಲ್ಲೂಕು ಹಾಗೂ ಮೈಸೂರು ಜಿಲ್ಲೆಯಲ್ಲಿ ಇರುವ ಹೋಟೆಲ್, ರೆಸಾರ್ಟ್ ಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸಿ ವಸತಿ ವ್ಯವಸ್ಥೆಯನ್ನು ಕಾಯ್ದಿರಿಸುವ ಕೆಲಸವಾಗಬೇಕು. ಜೊತೆಗೆ ಅಲ್ಲಿ ಮೂಲಭೂತ ವ್ಯವಸ್ಥೆಗಳ ಬಗ್ಗೆಯೂ ಗಮನಹರಿಸಬೇಕು ಎಂದರು.

ವಸತಿ ವ್ಯವಸ್ಥೆ ಇರುವ ಸ್ಥಳದಿಂದ ಕಾರ್ಯಕ್ರಮಕ್ಕೆ ಕರೆದುಕೊಂಡು ಬರಲು ವಾಹನದ ವ್ಯವಸ್ಥೆಯನ್ನು ಮಾಡಲಾಗುವುದು. ವಸತಿ ಸಮಿತಿಯು ನಿಮ್ಮ ಹಂತದಲ್ಲಿ ಕೂಡಲೇ ಸಭೆ ನಡೆಸಿ ಕ್ರಿಯಾಯೋಜನೆಯನ್ನು ಸಲ್ಲಿಸಬೇಕು ಎಂದರು.

ನಗರ ಅಲಂಕಾರ ಮತ್ತು ವಿದ್ಯುತ್ ವ್ಯವಸ್ಥೆ ಸಮಿತಿ
ನಗರ ಅಲಂಕಾರ ಮತ್ತು ವಿದ್ಯುತ್ ವ್ಯವಸ್ಥೆ ಸಮಿತಿಯು ಎಲ್ಲಾ ರಸ್ತೆಗಳು ಹಾಗೂ ಮುಖ್ಯ ದ್ವಾರಗಳಿಗೂ ವಿದ್ಯುತ್ ಅಲಂಕಾರ ಮಾಡಬೇಕು. ಅದಕ್ಕೆ ಸಂಬಂಧಿಸಿದ ಯೋಜನೆಗಳನ್ನು ರಚಿಸಿ ಎಂದರು.

ಸ್ವಚ್ಛತಾ ಸಮಿತಿ ಹಾಗೂ ನಗರ ಅಲಂಕಾರ ಸಮಿತಿಯನ್ನು ಒಳಗೊಂಡಂತೆ ಒಂದು ಉಪ ಸಮಿತಿಯನ್ನು ರಚಿಸಲಾಗುವುದು. 2 ಸಮಿತಿಯು ಸಹ ಪ್ಲಾಸ್ಟಿಕ್ ನಿಷೇಧಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

ವಸ್ತು ಪ್ರದರ್ಶನ ಸಮಿತಿ
ವಸ್ತು ಪ್ರದರ್ಶನ ಸಮಿತಿಗೆ ಸಂಬಂಧಿಸಿದಂತೆ ಎಷ್ಟು ಮಳಿಗೆ ಹಾಕಬಹುದು ಎಂದು ಯೋಜನೆ ರೂಪಿಸಿಕೊಳ್ಳಿ. ಒಂದೇ ರೀತಿಯ ಮಳಿಗೆಗಳನ್ನು ಹಾಕುವ ಬದಲು ವಿವಿಧ ರೀತಿಯ ವೈವಿಧ್ಯಮಯ ಮಳಿಗೆಗಳನ್ನು ಏರ್ಪಡಿಸಿ. ಆಹಾರ ಮಳಿಗೆ ಜೊತೆಗೆ ಇಲಾಖೆಗಳಿಂದ ಸಂಬಂಧಿಸಿದ ಮಳಿಗೆಗಳನ್ನು ತೆರೆದು ಜಾಗೃತಿ ಮೂಡಿಸುವ ಕೆಲಸವಾಗಬೇಕು. ಬೇರೆ ಬೇರೆ ಜಿಲ್ಲೆಗಳಿಗೂ ಮಳಿಗೆ ನೀಡಲು ಅವಕಾಶ ಕಲ್ಪಿಸಲಾಗುವುದು. ಮಳಿಗೆಗಳನ್ನು ವಿನೂತನ ಹಾಗೂ ಪರಿಣಾಮಕಾರಿಯಾಗಿ ಏರ್ಪಡಿಸುವ ಸಂಬಂಧ ಈಗಿನಿಂದಲೇ ಚರ್ಚಿಸಿ ಎಂದರು.

ಮಹಿಳಾ ಸಮಿತಿ
ಸಮ್ಮೇಳನಕ್ಕೆ ಬರುವ ಮಹಿಳಾ ಗಣ್ಯರನ್ನು ಸೇರಿದಂತೆ ಪ್ರತಿಯೊಬ್ಬ ಮಹಿಳೆಯರಿಗೂ ವಿಶೇಷ ಕಾಳಜಿ ವಹಿಸಿ ಅವರಿಗೆ ಬೇಕಾದಂತಹ ಮೂಲಭೂತ ವ್ಯವಸ್ಥೆ ಕಲ್ಪಿಸುವ ವ್ಯವಸ್ಥೆ ಮಾಡಲಾಗುವುದು. ಮಹಿಳೆಯರಿಗೆ ಗೌರವ ಹಾಗೂ ರಕ್ಷಣೆಯನ್ನು ನೀಡುವಲ್ಲಿ ಹೆಚ್ಚು ಕಾಳಜಿ ವಹಿಸಿ ಸೂಕ್ತ ವ್ಯವಸ್ಥೆ ನೀಡಲಾಗುವುದು ಎಂದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸಮನ್ವಯ ಸಮಿತಿ ಅಧ್ಯಕ್ಷೆ ಡಾ: ಮೀರಾ ಶಿವಲಿಂಗಯ್ಯ, ಆಹಾರ ಸಮಿತಿಯ ಉಪಾಧ್ಯಕ್ಷ ಸಿ ಡಿ ಗಂಗಾಧರ್, ಮಹಿಳಾ ಸಮಿತಿಯ ಅಧ್ಯಕ್ಷೆ ಸುನಂದಾ ಜಯರಾಮ್, ಉಪಾಧ್ಯಕ್ಷೆ ಸೌಭಾಗ್ಯ ಮಹದೇವು, ಕನ್ನಡ ಸಾಹಿತ್ಯ ಸಮ್ಮೇಳನದ ಗೌರವ ಕಾರ್ಯದರ್ಶಿ ಹರ್ಷ, ವಸತಿ ಸಮಿತಿ ಹಾಗೂ ನಗರ ಅಲಂಕಾರ ಮತ್ತು ವಿದ್ಯುತ್ ವ್ಯವಸ್ಥೆ ಸಮಿತಿಯ ಎಂ ಟಿ ರಾಜೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

4 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

4 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

4 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

5 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

6 hours ago