ಮಂಡ್ಯ

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಾರ್ಯನಿಮಿತ್ತ ಮೈಸೂರಿನಿಂದ ಸ್ವಗ್ರಾಮಕ್ಕೆ ಬರುವ ಸಂದರ್ಭದಲ್ಲಿ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತ ಜ್ಞಾನೇಶ್ ಅವರು ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯಲ್ಲಿ ನಿರ್ಮಾಪಕರ ವಲಯದಿಂದ ಸ್ಪರ್ಧಿಸಿ ಮೈಸೂರು-ಮಂಡ್ಯ ಜಿಲ್ಲೆಗಳ ಪ್ರತಿನಿಧಿಸುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡು ದಶಕಗಳಿಂದ ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಕ್ರಿಯರಾಗಿದ್ದ ನರಹಳ್ಳಿ ಜ್ಞಾನೇಶ್ ಸುರೇಶ್ ಅರಸ್ ಅವರ ಬಳಿ ಸಂಕಲನ ಕಲಿತು ಹಲವಾರು ಧಾರವಾಹಿಗಳು, ಸಾಕ್ಷ್ಯ ಚಿತ್ರಗಳು, ಕಿರುಚಿತ್ರಗಳು, ಸಿನಿಮಾಗಳಿಗೆ ಸಂಕಲನಕಾರಾಗಿ ಕೆಲಸ ಮಾಡಿದ್ದರು. ಇವರು ಜಗ್ಗೇಶ್ ಅಭಿನಯದ ‘ಎದ್ದೇಳು ಮಂಜುನಾಥ’ ಸಿನಿಮಾದ ಸಂಕಲನಕ್ಕಾಗಿ ರಾಜ್ಯ ಪ್ರಶಸ್ತಿ ಸಹ ಪಡೆದಿದ್ದರು.

ಹುಟ್ಟೂರು ನರಹಳ್ಳಿಯನ್ನು ಕೇಂದ್ರವಾಗಿಸಿಕೊಂಡು ಹಸಿರುಭೂಮಿ ಟ್ರಸ್ಟ್ ಸ್ಥಾಪಿಸಿ, ಅದರ ಅಧ್ಯಕ್ಷರಾಗಿ ಜ್ಞಾನೇಶ್ ಅವರು ಮಂಡ್ಯ ಮತ್ತು ಮೈಸೂರು ಮತ್ತು ಮಂಡ್ಯ ಜಿಲ್ಲೆಯಾದ್ಯಂತ ಪರಿಸರ, ಸಾಹಿತ್ಯ, ಜನಪದ, ನಾಟಕ, ಸಿನಿಮಾ, ರಂಗಭೂಮಿ ಸಂಬಂಧಿಯಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಕಾರ್ಯೋನ್ಮುಖರಾಗುವ ಮೂಲಕ ಸಮಾಜಸೇವೆಯಲ್ಲಿ ನಿರತರಾಗಿದ್ದರು. ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದ ಹಲವು ದಿಗ್ಗಜರ ಜೊತೆಗೆ ನಿಕಟವಾದ ಸಂಪರ್ಕ ಹೊಂದಿದ್ದರು.

ಮೇಲುಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಸಾಹಿತಿ ಟಿ. ಸತೀಶ್ ಜವರೇಗೌಡ, ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಬಾಲರಾಜ್, ಚಲನಚಿತ್ರ ನಾಯಕ ನಟ ಜಯಪ್ರಕಾಶ್ (ಜೆಪಿ), ಸಂಕಲನಕಾರ ನಾಗೇಂದ್ರ ಅರಸ್, ವಿನ್ಯಾಸಕಾರ ಪ್ರಕಾಶ್ ಚಿಕ್ಕಪಾಳ್ಯ, ಸಂಗೀತ ನಿರ್ದೇಶಕ ನಾಗೇಶ್ ಕಂದೇಗಾಲ, ರಂಗಕರ್ಮಿ ಚಂದ್ರು ಮಂಡ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಕಟಪೂರ್ವ ನಿರ್ದೇಶಕ ಜೆ.ಬಿ. ಸಿದ್ದೇಗೌಡ, ಪತ್ರಕರ್ತ ಜೀವನ್ಮುಖಿ ಸುರೇಶ್ ರೈತ ಸಂಘದ ಮುಖಂಡರೂ ಸೇರಿದಂತೆ ನೂರಾರು ಗಣ್ಯರು ನರಹಳ್ಳಿ ಜ್ಞಾನೇಶ್ ಅವರ ಅಂತಿಮ ದರ್ಶನ ಪಡೆದರು.

ಮೃತರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಪಾಂಡವಪುರ ತಾಲ್ಲೂಕಿನ ನರಹಳ್ಳಿಯಲ್ಲಿ ನೆರವೇರಿತು. ಮೃತರಿಗೆ ಪಾಂಡವಪರ ತಾಲ್ಲೂಕು ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕೋಕಿಲ, ಪುತ್ರ ಚಿರಾಗ್, ಪುತ್ರಿ ಇಂಪನಾ ಅವರನ್ನು ಅಗಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

28 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

31 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

37 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

41 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

49 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago