ಮಂಡ್ಯ

ಜಾತಿಯತೆ ವಿರುದ್ಧ ಹೋರಾಡಿದ ಸಂತ ಬ್ರಹ್ಮಶ್ರೀ ನಾರಾಯಣಗುರು: ಡಿಸಿ ಕುಮಾರ

ಮಂಡ್ಯ: ಮಹಾನ್ ದಾರ್ಶನಿಕರಾದ ಬ್ರಹ್ಮಶ್ರೀ ನಾರಾಯಣಗುರು ಜಾತಿಯತೆ ವಿರುದ್ಧ ಹೋರಾಡಿದ ಮಹಾನ್‌ ಸಂತ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್‌ ಹೇಳಿದರು.

ಅವರು ಇಂದು(ಆ.22) ನಗರದ ಗಾಂಧಿಭವನದಲ್ಲಿ ನಡೆದ 2024 – 25ನೇ ಸಾಲಿನ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು.

ಯಾವುದೇ ಜಾತಿ, ಧರ್ಮ, ಭೇದಗಳಿಲ್ಲ ನಾವೆಲ್ಲರೂ ಕೂಡ ಮನುಷ್ಯರು ಎಂದು ತಿಳಿಸಿದ ಬ್ರಹ್ಮಶ್ರೀ ನಾರಾಯಣ ಗುರು ಅವರ ತತ್ವ ಹಾಗೂ ಚಿಂತನೆ ನಮ್ಮ ನಡೆ – ನುಡಿಯಲ್ಲಿ ಅಡಗಿರಬೇಕು. ಸಮಾಜದಲ್ಲಿರುವ ಮೂಢನಂಬಿಕೆ, ಅಸ್ಪೃಶ್ಯತೆ, ಮಡಿವಂತಿಕೆಗಳೆಲ್ಲವೂ ಹೋಗಲಾಡುವುದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬುದನ್ನು ಪ್ರತಿಪಾದನೆ ಮಾಡಿದ್ದರು ಎಂದರು.

ನಾರಾಯಣ ಗುರುಗಳು ಕೇರಳದಲ್ಲಿ ಹುಟ್ಟಿದ್ದರೂ  ಕೂಡ ಇಡೀ ನಾಡಿನಾದ್ಯಂತ ಅವರ ಆದರ್ಶಗಳು, ಚಿಂತನೆಗಳು ಪಸರಿಸಿದೆ.  ಅವರು ಹಾಕಿಕೊಟ್ಟಂತ ಮಾರ್ಗದರ್ಶನಗಳು  ಇಂದಿಗೂ ಪ್ರಸ್ತುತವಾಗಿದ್ದು, ಅವುಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಾಡಿಗೆ ಕೊಡುಗೆ ನೀಡಿದ ಎಲ್ಲಾ ಮಹಾತ್ಮರ ಜಯಂತಿಗಳನ್ನು ಸರ್ಕಾರದ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದ್ದೂ ಇಂದು ನಾವು ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಆಚರಿಸುತ್ತಿದ್ದೇವೆ. ನಾವು ಕೇವಲ ಜಯಂತಿಯನ್ನು ಆಚರಿಸಿ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಕ್ಕೆ ಸೀಮಿತವಾಗದೆ, ಅವರು ನೀಡಿದಂತಹ ಕೊಡುಗೆಗಳು, ಅವರು ಚಿಂತನೆ ಹಾಗೂ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಒಳ್ಳೆಯ ಪ್ರಜೆಗಳಾಗಬೇಕು ಎಂದು ಹೇಳಿದರು.

ಬ್ರಿಟಿಷರ ಆಳ್ವಿಕೆಯ ಕಾಲಘಟ್ಟದಲ್ಲಿ ಇದ್ದಂತಹ ನಾರಾಯಣ ಗುರುಗಳು ಅಂದಿನ ಸಮಾಜದಲ್ಲಿದ್ದ ಮೂಢನಂಬಿಕೆ, ಅಸ್ಪೃಶ್ಯತೆಯನ್ನು ಧಿಕ್ಕರಿಸಿ ಅವುಗಳನ್ನು ಹೋಗಲಾಡಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ. ಆದ್ದರಿಂದ ಅವರನ್ನು ಸಾಮಾಜಿಕ ಸುಧಾರಣೆಯ ಹರಿಕಾರ ಎಂದು ಕರೆಯಬಹುದು ಎಂದರು.

ಕರಾವಳಿಯ ಭಾಗಗಳದ ಉಡುಪಿ, ಮಂಗಳೂರು, ಕೇರಳ ಮುಂತಾದ ಭಾಗದಲ್ಲಿ ನಾರಾಯಣ ಗುರುವನ್ನು ಯಾವುದೇ ಜಾತಿ, ಧರ್ಮಗಳ ಹೊರತಾಗಿ ಪ್ರತಿ ಮನೆ, ಬೀದಿಗಳಲ್ಲಿಯೂ ಕೂಡ ಅವರನ್ನು ದೈವ ಸ್ವರೂಪವಾಗಿ ಪೂಜೆಯ ಮೂಲಕ ಆರಾಧಿಸಲಾಗುತ್ತದೆ. ಅದನ್ನ ನಾವು ಅರಿತುಕೊಂಡು ಅವರ ಸಾಧನೆಯನ್ನು ಸ್ಮರಿಸಬೇಕು. ಜೊತೆಗೆ ತಮ್ಮ ಮಕ್ಕಳಿಗೂ ಅವರ ಜೀವನ ಚರಿತ್ರೆಯ ಬಗ್ಗೆ ತಿಳಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ಮಂಡ್ಯ ವಿಶ್ವವಿದ್ಯಾನಿಲಯ ವಾಣಿಜ್ಯಶಾಸ್ತ್ರದ ಉಪನ್ಯಾಸಕ ಜಿ ವಿ ರಮೇಶ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರುಗಳು 1856 ಆಗಸ್ಟ್ 20 ರಂದು ಕೇರಳದಲ್ಲಿ ಜನಿಸಿದರು. ನಾರಾಯಣಗುರುಗಳು ಎಂದಿಗೂ ಸಮಯ ವ್ಯರ್ಥ ಮಾಡದೆ ಯೋಗ, ಧ್ಯಾನಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಅಂದಿನ ಕಾಲದ ಅತೀ ಕೆಳ ವರ್ಗದಲ್ಲಿ ಇದ್ದಂತಹ ಕಡು ಬಡತನ ಹಾಗೂ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಪಣತೊಟ್ಟಿದ್ದರು ಎಂದು ಪ್ರತಿಪಾದಿಸಿದರು.

ಕೆಳವರ್ಗದಲ್ಲಿ ಜನಿಸಿದ ನಾರಾಯಣ ಗುರು ಅವರು ಅಂದಿನ ಸಮಾಜದಲ್ಲಿದ್ದ ಎಲ್ಲಾ ರೀತಿಯ ಮೇಲ್ವರ್ಗದ ದೌರ್ಜನ್ಯಗಳ ವಿರುದ್ದ ಹೋರಾಡಿ, ಸಮಾಜದಲ್ಲಿ ಸಮಾನತೆಯನ್ನು ತರುವಲ್ಲಿ ಬಹಳವಾಗಿ ಶ್ರಮಿಸಿದ್ದಾರೆ. ಕೆಳ ವರ್ಗದ ಹೆಣ್ಣುಮಕ್ಕಳ ಮೇಲೆ ಆಗುತ್ತಿದ್ದಂತಹ ಶೋಷಣೆಗಳನ್ನು ಹೋಗಲಾಡಿಸಲು ಪ್ರಮುಖ ಪಾತ್ರ ವಹಿಸಿದವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ ಬಿ ವಿ ನಂದೀಶ್, ಮೈಶುಗರ್ ಕಾರ್ಖಾನೆಯ ಮಾಜಿ ಅಧ್ಯಕ್ಷ ರಾಮಲಿಂಗಯ್ಯ, ಮಂಡ್ಯ ಜಿಲ್ಲಾ ಆರ್ಯ ಈಡಿಗರ ಸಂಘದ ಗೌರವಾಧ್ಯಕ್ಷ ಡಾ. ಎಂ ವಿ ಸತ್ಯನಾಥ್, ಅಧ್ಯಕ್ಷ ಅಪ್ಪಾಜಿಗೌಡ, ಉಪಾಧ್ಯಕ್ಷರುಗಳಾದ ಹೆಚ್ ದಾಸೇಗೌಡ, ಎಂ ಪಿ ಅರುಣ ಕುಮಾರ್, ಎಂ ವಿ ಪುಟಾಸ್ವಾಮಿ, ಪ್ರಧಾನ ಕಾರ್ಯದರ್ಶಿ ಜಿ ಸಿ ರಾಜ್ ಕುಮಾರ್, ಖಜಾಂಚಿ ಟಿ ಅರವಿಂದ ಕುಮಾರ್, ಸಹಕಾರ್ಯದರ್ಶಿಗಳಾದ ಮಾದೇವ, ಸಿ ಸೋಮಶೇಖರ್, ಸಂಘಟನಾ ಕಾರ್ಯದರ್ಶಿ ಟಿ ಎಸ್ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

11 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

15 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

16 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago