ತುಮಕೂರು: ನಗರದ ವಿದ್ಯಾನಿಧಿ ಕಾಲೇಜಿನ ಎಂ. ಜ್ಞಾನವಿ ಎಂಬ ವಿದ್ಯಾರ್ಥಿನಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ 600ಕ್ಕೆ 597 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ.
ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀಚನಹಳ್ಳಿ ಗ್ರಾಮದ ಡಿಎಲ್ ಮಂಜುನಾಥ್ ಹಾಗೂ ಡಿ ಮಂಜುಳಾ ದಂಪತಿಯ ಪುತ್ರಿ ಜ್ಞಾನವಿ ತುಮಕೂರಿನ ವಿದ್ಯಾನಿಧಿ ಕಾಲೇಜು ಹಾಸ್ಟೆಲ್ನಲ್ಲಿದ್ದುಕೊಂಡು ವ್ಯಾಸಂಗ ಮಾಡಿದ್ದು, ಪ್ರಥಮ ಪಿಯುಸಿಯಲ್ಲಿ 600ಕ್ಕೆ 600 ಅಂಕವನ್ನು ಗಳಿಸಿದ್ದರು.
ಇನ್ನು ಜ್ಞಾನವಿಯ ಪೋಷಕರು ಬೀಚನಹಳ್ಳಿಯಲ್ಲಿ ಹೊಟೇಲ್ ನಡೆಸುತ್ತಿದ್ದಾರೆ. ಫಲಿತಾಂಶ ಹೊರಬಿದ್ದ ಬಳಿಕ ಮಾತನಾಡಿದ ಜ್ಞಾನವಿ ʼಹಾಸ್ಟೆಲ್ನಲ್ಲಿ ಇದ್ದುಕೊಂಡು ಅಭ್ಯಾಸ ಮಾಡಿದ್ದು ನೆರವಾಯಿತು. ಯಾವುದೇ ಒಂದು ವಿಷಯವನ್ನು ಓದಲು ಕುಳಿತರೆ ಅದು ಪೂರ್ತಿಯಾಗುವ ತನಕ ಬಿಡುತ್ತಿರಲಿಲ್ಲ. ಸಾಮಾಜಿಕ ಜಾಲತಾಣದ ಹಾಗೂ ಮೊಬೈಲ್ನಿಂದ ನಾನು ದೂರ ದೂರ. ಫಲಿತಾಂಶ ನೋಡಿ ತುಂಬಾ ಖುಷಿಯಾಗಿದೆ. ಮನೆಯಲ್ಲಿ ಹಬ್ಬದ ವಾತಾವರಣ ಇದೆʼ ಎಂದು ಹೇಳಿಕೊಂಡರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…