ಮಂಡ್ಯ : ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡಿ ಬೀಳ್ಕೊಟ್ಟ ಘಟನೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ.
ಪೋಲಿಸ್ ಇನ್ಸ್ ಪೆಕ್ಟರ್ ಸುಮಾರಾಣಿಯವರು ಶಾರದಾ ಮತ್ತು ಅಸ್ಮಬಾನು ಎಂಬ ಇಬ್ಬರು ಗರ್ಭಿಣಿ ಮಹಿಳಾ ಪೇದೆಗಳಿಗೆ ಸೀಮಂತ ಮಾಡಿ ಮಡಿಲಿಗೆ ಮಡಿಲಕ್ಕಿ ತುಂಬಿ ಶುಭ ಹಾರೈಸಿದ್ದಾರೆ.
ಠಾಣಾ ಸಿಬ್ಬಂದಿಗಳು ಇಬ್ಬರು ಮಹಿಳಾ ಪೇದೆಗಳಿಗೆ ಉಡಿ ತುಂಬಿ, ಮಡಿಲಕ್ಕಿ ಹಾಕಿ, ಕೊಬ್ಬರಿ ಬೆಲ್ಲ, ತೆಂಗಿನಕಾಯಿ, ಅರಿಶಿಣ-ಕುಂಕುಮ ಹಾಗೂ ಬಳೆಗಳನ್ನು ನೀಡಿ ಸೀಮಂತ ಕಾರ್ಯ ಮಾಡಿದ್ದಾರೆ. ಆ ಮೂಲಕ ಇಬ್ಬರು ಮಹಿಳಾ ಪೇದೆಗಳನ್ನ ಗೌರವಿಸಿ ಬೀಳ್ಕೊಟ್ಟಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…