ಮಂಡ್ಯ : ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡಿ ಬೀಳ್ಕೊಟ್ಟ ಘಟನೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ.
ಪೋಲಿಸ್ ಇನ್ಸ್ ಪೆಕ್ಟರ್ ಸುಮಾರಾಣಿಯವರು ಶಾರದಾ ಮತ್ತು ಅಸ್ಮಬಾನು ಎಂಬ ಇಬ್ಬರು ಗರ್ಭಿಣಿ ಮಹಿಳಾ ಪೇದೆಗಳಿಗೆ ಸೀಮಂತ ಮಾಡಿ ಮಡಿಲಿಗೆ ಮಡಿಲಕ್ಕಿ ತುಂಬಿ ಶುಭ ಹಾರೈಸಿದ್ದಾರೆ.
ಠಾಣಾ ಸಿಬ್ಬಂದಿಗಳು ಇಬ್ಬರು ಮಹಿಳಾ ಪೇದೆಗಳಿಗೆ ಉಡಿ ತುಂಬಿ, ಮಡಿಲಕ್ಕಿ ಹಾಕಿ, ಕೊಬ್ಬರಿ ಬೆಲ್ಲ, ತೆಂಗಿನಕಾಯಿ, ಅರಿಶಿಣ-ಕುಂಕುಮ ಹಾಗೂ ಬಳೆಗಳನ್ನು ನೀಡಿ ಸೀಮಂತ ಕಾರ್ಯ ಮಾಡಿದ್ದಾರೆ. ಆ ಮೂಲಕ ಇಬ್ಬರು ಮಹಿಳಾ ಪೇದೆಗಳನ್ನ ಗೌರವಿಸಿ ಬೀಳ್ಕೊಟ್ಟಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…