ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆದಿದ್ದು, ಇದರ ಬೆನ್ನಲ್ಲೇ ಜಿಲ್ಲೆಯ ಪರಿಷತ್ತಿನ ಎಲ್ಲಾ ಆಡಳಿತ ಮಂಡಳಿಯನ್ನು ವಿಸರ್ಜಿಸಿದ್ದು, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ನೂತನ ಅಧ್ಯಕ್ಷ ಎಚ್.ಎಸ್.ಮುದ್ದೇಗೌಡ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿ ಜಿಲ್ಲಾ ಪರಿಷತ್ತಿಗೆ ನಾಲ್ಕು ಮಂದಿ ಪದಾಧಿಕಾರಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಜಿಲ್ಲಾ ಗೌರವ ಕಾರ್ಯದರ್ಶಿಯಾಗಿ ಹುಸ್ಕೂರು ಕೃಷ್ಣೇಗೌಡ, ಜಿಲ್ಲಾ ಕಾರ್ಯದರ್ಶಿಯಾಗಿ ಸುಜಾತ ಕೃಷ್ಣ, ಕೋಶಾಧ್ಯಕ್ಷರಾಗಿ ಬಿ.ಎಂ.ಅಪ್ಪಾಜಪ್ಪ, ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಮುಂದಿನ ವಾರದಲ್ಲಿ ಎಲ್ಲಾ ತಾಲೂಕಿಗೆ ಭೇಟಿ ನೀಡಿ, ರಾಜಕೀಯ ಹೊರತು ಪಡಿಸಿ ಆಸಕ್ತಿಯಿಂದ ಕೆಲಸ ಮಾಡುವವರನ್ನು ನೇಮಕ ಮಾಡಲಾಗುವುದು. ಜಿಲ್ಲಾ ಸಮ್ಮೇಳನಕ್ಕೆ ೬ ಲಕ್ಷ ರೂ ಗಳನ್ನು ರಾಜ್ಯ ಸರ್ಕಾರ ನೀಡಲಿದ್ದು, ಅದನ್ನು ೬.೫೦ ಲಕ್ಷಕ್ಕೆ ಹೇರಿಸಲು ಪ್ರಯತ್ನ ಮಾಡಲಾಗುವುದು. ತಾಲೂಕು ಸಮ್ಮೇಳನಕ್ಕೆ ೧ ಲಕ್ಷ ಹೋಬಳಿ ಸಮ್ಮೇಳನಕ್ಕೆ ೫೦ ಸಾವಿರ ನೀಡುತ್ತಿದ್ದು ಅದನ್ನು ಹೆಚ್ವಿಸಲು ಶ್ರಮಿಸಲಾಗುವುದು ಎಂದು ಹೇಳಿದರು.
ಒಂದು ತಿಂಗಳಿನಲ್ಲಿ ಹೊಸ ಆಡಳಿತ ಮಂಡಳಿಯ ಕಾರ್ಯಗಳನ್ನು ಮುಗಿಸಿ ಅಧಿಕೃತವಾಗಿ ಸಾಹಿತ್ಯ ಪರಿಷತ್ತಿನ ಕೆಲಸಗಳನ್ನು ಪ್ರಾರಂಭಿಸುವುದಾಗಿ ತಿಳಿಸಿದ ಅವರು ಜಿಲ್ಲೆಯಲ್ಲಿರುವ ಕನ್ನಡ ಭವನ ಸರ್ಕಾರ ಇತರೆ ಇಲಾಖೆ ನೀಡುವುದು ಅಥವಾ ಮಾರಾಟ ಮಾಡುವುದಕ್ಕೆ ನಿರ್ಣಯಿಸಲಾಗಿದ್ದು, ನೂತನ ಕನ್ನಡ ಭವನವನ್ನು ನಗರದ ಕೇಂದ್ರ ಭಾಗದಲ್ಲಿ ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಇದೇ ವೇಳೆ ಹೇಳಿದರು.
ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸನ್ನು ಕಂಡಿದ್ದು, ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಸಮಾಜದ ವರ್ಗದ ಜನ ಸಮೂಹಕ್ಕೆ ಕೇಂದ್ರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಕೃತಜ್ಞಗತೆ ಸಲ್ಲಿಸಿದರು.
ಸಮ್ಮೇಳನದ ವಿಚಾರವಾಗಿ ನೂರು ಜನದ ಪೈಕಿ ಐದು ಮಂದಿ ವಕ್ರವಾಗಿ ಮಾತನಾಡುವುದು ಸಹಜ, ಒಪ್ಪಿಗೆ ಸೂಚಿಸಿದವರ ಸಂಖ್ಯೆ ಹೆಚ್ಚಿದ್ದು ಅದಕ್ಕೆ ಮನ್ನಣೆ ನೀಡಬೇಕು ಎಂದ ಅವರು, ಜಿಲ್ಲೆಗೆ ಸಮ್ಮೇಳನ ತಂದ ಕೇಂದ್ರ ಪರಿಷತ್ತಿನ ಅಧ್ಯಕ್ಷರ ಕಾಲೆಳೆಯುವುದು ಜಿಲ್ಲೆಗೆ ಶೋಭೆ ತರುವಂತದ್ದಲ್ಲ. ಹಾಗೆಯೆ ಹಾವೇರಿ ಸಮ್ಮೇಳನವನ್ನು ಮೀರಿದ ರೀತಿಯಲ್ಲಿ ಮಂಡ್ಯ ಸಮ್ಮೇಳನ ನಡೆದಿದೆ ಎಂದು ತಚ್ಛವಾಗಿ ಮಾತನಾಡಿದ್ದರಿಂದಾಗಿ ಹಾವೇರಿ ಜನರು ಪ್ರತಿಭಟನೆ ನಡೆಸುವಂತಾಗಿದ್ದು, ಇದು ಬೇಕಿತ್ತೇ ಎಂದು ಪ್ರಶ್ನಸಿದರು.
ಹೊಸ ಹೊಸ ಯೋಜನೆಗಳನ್ನು ತಂದು ಸಮ್ಮೇಳನ ನಡೆಸಿದ್ದು, ಹೊರ ದೇಶದ ಶೇ.೯೫ರಷ್ಟು ಕನ್ನಡಿಗರು ನಮ್ಮ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಇದು ಪ್ರಪ್ರಥಮವಾಗಿ ನಡೆದ ಬದಲಾವಣೆಯಾಗಿದೆ. ಹೊರದೇಶದವರನ್ನು ಏಕೆ ಕರೆಯಬೇಕಿತ್ತು. ವಿಶ್ವೇರಯ್ಯ ಅವರ ಮೊಮ್ಮಗಳನ್ನು ಏಕೆ ಕೆರೆತರಬೇಕು ಎಂದು ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರೊ.ಜಯಪ್ರಕಾಶ್ಗೌಡ, ಜಿ.ಟಿ.ವೀರಪ್ಪ, ಎಸ್.ಬಿ.ಶಂಕರೇಗೌಡ, ವಾ.ನಂ ಶಿವರಾಮು, ಸತೀಶ್ ಜವರೇಗೌಡ ಸೇರಿದಂತೆ ಹಲವರು ಸಮ್ಮೇಳನದ ವಿರುದ್ಧ ಮಾತನಾಡಿದ್ದು, ಅದು ಶೋಭೆ ತರುವಂತದ್ದಲ್ಲ, ಉಚಿತವಾದದ್ದೂ ಅಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಹುಸ್ಕೂರು ಕೃಷ್ಣೇಗೌಡ, ಜಿಲ್ಲಾ ಕಾರ್ಯದರ್ಶಿ ಸುಜಾತ ಕೃಷ್ಣ, ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ಪದಾಧಿಕಾರಿಗಳಾದ ದರಸಗುಪ್ಪೆ ಧನಂಜಯ, ಮಂಜುನಾಥ ಬಲ್ಲೇನಹಳ್ಳಿ, ಚಿಕ್ಕತಿಮ್ಮಯ್ಯ ಇದ್ದರು.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…