ಮಂಡ್ಯ

ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ ಹಿರಿಯ ನಟಿ ಲೀಲಾವತಿ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಮತ್ತು ಅವರ ಪುತ್ರ ನಟ ವಿನೋದ್‌ರಾಜ್ ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ನಗರದ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರಿನ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಾಯಿ-ಮಗ ಇಳಿ ವಯಸ್ಸಿನಲ್ಲಿಯೂ ಹೋರಾಟ ಮಾಡುವ ಮೂಲಕ ಕಾವೇರಿ ಚಳುವಳಿಗೆ ಸ್ಫೂರ್ತಿಯಾದರು.
ನಟಿ ಲೀಲಾವತಿ, ವಿನೋದ್ ರಾಜ್ ಬಂದೊಡನೆ ಹಿತರಕ್ಷಣಾ ಸಮಿತಿಯ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡು, ರೈತರ ಹೋರಾಟದಲ್ಲಿ ಭಾಗಿಯಾಗಿರುವುದಕ್ಕೆ ಸಾರ್ಥಕ ಮನೋಭಾವ ವ್ಯಕ್ತಪಡಿಸಿ ಕಾವೇರಿ ಮಾತೆ ರೈತರಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಆಶಿಸಿದರು.

ನಟ ವಿನೋದ್‌ರಾಜ್ ಮಾತನಾಡಿ, ಕನ್ನಂಬಾಡಿಯಿಂದ ಬೆಂಗಳೂರಿನವರೆಗೆ ಕನ್ನಡಿಗರು ಕಾವೇರಿ ನೀರನ್ನು ಆಶ್ರಯಿಸಿ ಬದುಕುತ್ತಿದ್ದಾರೆ, ಪ್ರಸ್ತುತ ಸನ್ನಿವೇಶದಲ್ಲಿ ಮಳೆಯ ಕೊರತೆಯಿಂದ ನೀರಿನ ಭಾವ ಇದೆ,ವರುಣ ಇನ್ನೂ ಸಹ ಕೃಪೆ ತೋರಿಲ್ಲ, ಕಳೆದ ಹಲವಾರು ವರ್ಷದಿಂದ ಕಾವೇರಿ ವಿಚಾರದಲ್ಲಿ ಕರ್ನಾಟಕ ಮತ್ತು ಮಂಡ್ಯ ಜಿಲ್ಲೆಯ ಜನತೆ ಸಾಕಷ್ಟು ನೋವು ಅನುಭವಿಸಿದ್ದು, ಇದು ನೋವಿನ ಸಂಗತಿ ಎಂದರು.

ಕಾವೇರಿ ವಿಚಾರದಲ್ಲಿ ಮಲತಾಯಿ ಧೋರಣೆ ಮುಂದುವರೆದಿದೆ. ನಿರಂತರ ಮೋಸ, ದ್ರೋಹ ಮಾಡಲಾಗಿದೆ, ಇಂತಹ ಸ್ಥಿತಿ ಬರಬಾರದು. ವಾಸ್ತವ ಪರಿಸ್ಥಿತಿಯನ್ನು ಎಲ್ಲರೂ ಅರಿಯಬೇಕು. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಕ್ಷೇಮ ಮುಖ್ಯ, ನೀರಿನ ವಿಚಾರದಲ್ಲಿ ಲೆಕ್ಕಾಚಾರ ಅಲ್ಲ, ನನಗೆಷ್ಟು ನಿಮಗೆಷ್ಟು ಎಂದು ಹೇಳಲಾಗದು ಎಂದರು.

ಕಾವೇರಿ ಹೋರಾಟ ಜಾತ್ಯತೀತ, ಪಕ್ಷಾತೀತವಾದದ್ದು, ಕಾವೇರಿ ನೀರು ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾದದ್ದಲ್ಲ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪರಿಸ್ಥಿತಿಯನ್ನು ಅರಿಯಬೇಕು ಮುಂದಿನ ದಿನಗಳಲ್ಲಿ ಕುಡಿಯಲು ನೀರಿಲ್ಲದ ಸಂಕಷ್ಟದ ದಿನಗಳು ಎದುರಾಗಲಿವೆ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ವಾಸ್ತವ ಪರಿಸ್ಥಿತಿಯನ್ನು ಅರಿತು ಆದೇಶ ನೀಡಬೇಕು ಎಂದು ಮನವಿ ಮಾಡಿದರು.
ಇಷ್ಟೊಂದು ಹೋರಾಟ ಮಾಡುವ ನಾವುಗಳು ಮಳೆ ಬಂದರೆ ಎಲ್ಲವನ್ನೂ ಮರೆತು ಬಿಡುತ್ತೇವೆ, ಮಳೆ ಬಂದಾಗಲೂ ನೀರು ಇದ್ದಾಗಲೂ ಮುನ್ನೆಚ್ಚರಿಕೆ ವಹಿಸಿ ಮುನ್ನಡೆಯ ಬೇಕು, ಕಾವೇರಿ ವಿಚಾರದಲ್ಲಿ ಸದಾ ಕಾಲ ಜಾಗೃತಿಯಲ್ಲಿರಬೇಕು ಎಂದರು.

ಸದ್ಯದ ಸಂಕಷ್ಟ ಸ್ಥಿತಿಯಿಂದ ಭುವನೇಶ್ವರಿ ತಾಯಿ, ಚಾಮುಂಡೇಶ್ವರಿ, ಕಾವೇರಿ ಮಾತೆ ಪಾರು ಮಾಡಿ ಕನ್ನಡಿಗರು ಮತ್ತು ರೈತರನ್ನ ಕಾಪಾಡಲಿ ಎಂದು ಹೇಳಿದರು.
ರೈತನ ಸ್ಥಿತಿ ಪ್ರತಿನಿತ್ಯ ಸಂಕಷ್ಟ ಎದುರಿಸುವಂತಾಗಿದೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಇದೀಗ ಬೆಳೆ ಹಾಕದ ಪರಿಸ್ಥಿತಿ ಎದುರಾಗಿದೆ, ಅರಣ್ಯ ಇಲಾಖೆ ರೈತರನ್ನ ಒಕ್ಕಲಿಬ್ಬಿಸುತ್ತಿದೆ, ಕಷ್ಟ ಎಂದು ಜಮೀನು ಮಾರಾಟ ಮಾಡುವಂತದ್ದಲ್ಲ, ಆಳುವ ಸರ್ಕಾರ ರೈತನ ಪರಿಸ್ಥಿತಿ ಅರಿಯಬೇಕೆಂದರು.

lokesh

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

10 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

10 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

10 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

10 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

10 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

10 hours ago