ಮಂಡ್ಯ

ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ ಹಿರಿಯ ನಟಿ ಲೀಲಾವತಿ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಮತ್ತು ಅವರ ಪುತ್ರ ನಟ ವಿನೋದ್‌ರಾಜ್ ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ನಗರದ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರಿನ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಾಯಿ-ಮಗ ಇಳಿ ವಯಸ್ಸಿನಲ್ಲಿಯೂ ಹೋರಾಟ ಮಾಡುವ ಮೂಲಕ ಕಾವೇರಿ ಚಳುವಳಿಗೆ ಸ್ಫೂರ್ತಿಯಾದರು.
ನಟಿ ಲೀಲಾವತಿ, ವಿನೋದ್ ರಾಜ್ ಬಂದೊಡನೆ ಹಿತರಕ್ಷಣಾ ಸಮಿತಿಯ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡು, ರೈತರ ಹೋರಾಟದಲ್ಲಿ ಭಾಗಿಯಾಗಿರುವುದಕ್ಕೆ ಸಾರ್ಥಕ ಮನೋಭಾವ ವ್ಯಕ್ತಪಡಿಸಿ ಕಾವೇರಿ ಮಾತೆ ರೈತರಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಆಶಿಸಿದರು.

ನಟ ವಿನೋದ್‌ರಾಜ್ ಮಾತನಾಡಿ, ಕನ್ನಂಬಾಡಿಯಿಂದ ಬೆಂಗಳೂರಿನವರೆಗೆ ಕನ್ನಡಿಗರು ಕಾವೇರಿ ನೀರನ್ನು ಆಶ್ರಯಿಸಿ ಬದುಕುತ್ತಿದ್ದಾರೆ, ಪ್ರಸ್ತುತ ಸನ್ನಿವೇಶದಲ್ಲಿ ಮಳೆಯ ಕೊರತೆಯಿಂದ ನೀರಿನ ಭಾವ ಇದೆ,ವರುಣ ಇನ್ನೂ ಸಹ ಕೃಪೆ ತೋರಿಲ್ಲ, ಕಳೆದ ಹಲವಾರು ವರ್ಷದಿಂದ ಕಾವೇರಿ ವಿಚಾರದಲ್ಲಿ ಕರ್ನಾಟಕ ಮತ್ತು ಮಂಡ್ಯ ಜಿಲ್ಲೆಯ ಜನತೆ ಸಾಕಷ್ಟು ನೋವು ಅನುಭವಿಸಿದ್ದು, ಇದು ನೋವಿನ ಸಂಗತಿ ಎಂದರು.

ಕಾವೇರಿ ವಿಚಾರದಲ್ಲಿ ಮಲತಾಯಿ ಧೋರಣೆ ಮುಂದುವರೆದಿದೆ. ನಿರಂತರ ಮೋಸ, ದ್ರೋಹ ಮಾಡಲಾಗಿದೆ, ಇಂತಹ ಸ್ಥಿತಿ ಬರಬಾರದು. ವಾಸ್ತವ ಪರಿಸ್ಥಿತಿಯನ್ನು ಎಲ್ಲರೂ ಅರಿಯಬೇಕು. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಕ್ಷೇಮ ಮುಖ್ಯ, ನೀರಿನ ವಿಚಾರದಲ್ಲಿ ಲೆಕ್ಕಾಚಾರ ಅಲ್ಲ, ನನಗೆಷ್ಟು ನಿಮಗೆಷ್ಟು ಎಂದು ಹೇಳಲಾಗದು ಎಂದರು.

ಕಾವೇರಿ ಹೋರಾಟ ಜಾತ್ಯತೀತ, ಪಕ್ಷಾತೀತವಾದದ್ದು, ಕಾವೇರಿ ನೀರು ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾದದ್ದಲ್ಲ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪರಿಸ್ಥಿತಿಯನ್ನು ಅರಿಯಬೇಕು ಮುಂದಿನ ದಿನಗಳಲ್ಲಿ ಕುಡಿಯಲು ನೀರಿಲ್ಲದ ಸಂಕಷ್ಟದ ದಿನಗಳು ಎದುರಾಗಲಿವೆ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ವಾಸ್ತವ ಪರಿಸ್ಥಿತಿಯನ್ನು ಅರಿತು ಆದೇಶ ನೀಡಬೇಕು ಎಂದು ಮನವಿ ಮಾಡಿದರು.
ಇಷ್ಟೊಂದು ಹೋರಾಟ ಮಾಡುವ ನಾವುಗಳು ಮಳೆ ಬಂದರೆ ಎಲ್ಲವನ್ನೂ ಮರೆತು ಬಿಡುತ್ತೇವೆ, ಮಳೆ ಬಂದಾಗಲೂ ನೀರು ಇದ್ದಾಗಲೂ ಮುನ್ನೆಚ್ಚರಿಕೆ ವಹಿಸಿ ಮುನ್ನಡೆಯ ಬೇಕು, ಕಾವೇರಿ ವಿಚಾರದಲ್ಲಿ ಸದಾ ಕಾಲ ಜಾಗೃತಿಯಲ್ಲಿರಬೇಕು ಎಂದರು.

ಸದ್ಯದ ಸಂಕಷ್ಟ ಸ್ಥಿತಿಯಿಂದ ಭುವನೇಶ್ವರಿ ತಾಯಿ, ಚಾಮುಂಡೇಶ್ವರಿ, ಕಾವೇರಿ ಮಾತೆ ಪಾರು ಮಾಡಿ ಕನ್ನಡಿಗರು ಮತ್ತು ರೈತರನ್ನ ಕಾಪಾಡಲಿ ಎಂದು ಹೇಳಿದರು.
ರೈತನ ಸ್ಥಿತಿ ಪ್ರತಿನಿತ್ಯ ಸಂಕಷ್ಟ ಎದುರಿಸುವಂತಾಗಿದೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಇದೀಗ ಬೆಳೆ ಹಾಕದ ಪರಿಸ್ಥಿತಿ ಎದುರಾಗಿದೆ, ಅರಣ್ಯ ಇಲಾಖೆ ರೈತರನ್ನ ಒಕ್ಕಲಿಬ್ಬಿಸುತ್ತಿದೆ, ಕಷ್ಟ ಎಂದು ಜಮೀನು ಮಾರಾಟ ಮಾಡುವಂತದ್ದಲ್ಲ, ಆಳುವ ಸರ್ಕಾರ ರೈತನ ಪರಿಸ್ಥಿತಿ ಅರಿಯಬೇಕೆಂದರು.

lokesh

Recent Posts

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

4 mins ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

8 mins ago

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…

1 hour ago

ಮಂಡ್ಯದಲ್ಲಿ ಎಆರ್‌ಎಐ ಸೆಂಟರ್‌ ತೆರೆಯಲು 500 ಕೋಟಿ ರೂ. : ಎಚ್‌ಡಿಕೆ

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…

2 hours ago

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

2 hours ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

3 hours ago