ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಮತ್ತು ಅವರ ಪುತ್ರ ನಟ ವಿನೋದ್ರಾಜ್ ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ನಗರದ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರಿನ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಾಯಿ-ಮಗ ಇಳಿ ವಯಸ್ಸಿನಲ್ಲಿಯೂ ಹೋರಾಟ ಮಾಡುವ ಮೂಲಕ ಕಾವೇರಿ ಚಳುವಳಿಗೆ ಸ್ಫೂರ್ತಿಯಾದರು.
ನಟಿ ಲೀಲಾವತಿ, ವಿನೋದ್ ರಾಜ್ ಬಂದೊಡನೆ ಹಿತರಕ್ಷಣಾ ಸಮಿತಿಯ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡು, ರೈತರ ಹೋರಾಟದಲ್ಲಿ ಭಾಗಿಯಾಗಿರುವುದಕ್ಕೆ ಸಾರ್ಥಕ ಮನೋಭಾವ ವ್ಯಕ್ತಪಡಿಸಿ ಕಾವೇರಿ ಮಾತೆ ರೈತರಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಆಶಿಸಿದರು.
ನಟ ವಿನೋದ್ರಾಜ್ ಮಾತನಾಡಿ, ಕನ್ನಂಬಾಡಿಯಿಂದ ಬೆಂಗಳೂರಿನವರೆಗೆ ಕನ್ನಡಿಗರು ಕಾವೇರಿ ನೀರನ್ನು ಆಶ್ರಯಿಸಿ ಬದುಕುತ್ತಿದ್ದಾರೆ, ಪ್ರಸ್ತುತ ಸನ್ನಿವೇಶದಲ್ಲಿ ಮಳೆಯ ಕೊರತೆಯಿಂದ ನೀರಿನ ಭಾವ ಇದೆ,ವರುಣ ಇನ್ನೂ ಸಹ ಕೃಪೆ ತೋರಿಲ್ಲ, ಕಳೆದ ಹಲವಾರು ವರ್ಷದಿಂದ ಕಾವೇರಿ ವಿಚಾರದಲ್ಲಿ ಕರ್ನಾಟಕ ಮತ್ತು ಮಂಡ್ಯ ಜಿಲ್ಲೆಯ ಜನತೆ ಸಾಕಷ್ಟು ನೋವು ಅನುಭವಿಸಿದ್ದು, ಇದು ನೋವಿನ ಸಂಗತಿ ಎಂದರು.
ಕಾವೇರಿ ವಿಚಾರದಲ್ಲಿ ಮಲತಾಯಿ ಧೋರಣೆ ಮುಂದುವರೆದಿದೆ. ನಿರಂತರ ಮೋಸ, ದ್ರೋಹ ಮಾಡಲಾಗಿದೆ, ಇಂತಹ ಸ್ಥಿತಿ ಬರಬಾರದು. ವಾಸ್ತವ ಪರಿಸ್ಥಿತಿಯನ್ನು ಎಲ್ಲರೂ ಅರಿಯಬೇಕು. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಕ್ಷೇಮ ಮುಖ್ಯ, ನೀರಿನ ವಿಚಾರದಲ್ಲಿ ಲೆಕ್ಕಾಚಾರ ಅಲ್ಲ, ನನಗೆಷ್ಟು ನಿಮಗೆಷ್ಟು ಎಂದು ಹೇಳಲಾಗದು ಎಂದರು.
ಕಾವೇರಿ ಹೋರಾಟ ಜಾತ್ಯತೀತ, ಪಕ್ಷಾತೀತವಾದದ್ದು, ಕಾವೇರಿ ನೀರು ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾದದ್ದಲ್ಲ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪರಿಸ್ಥಿತಿಯನ್ನು ಅರಿಯಬೇಕು ಮುಂದಿನ ದಿನಗಳಲ್ಲಿ ಕುಡಿಯಲು ನೀರಿಲ್ಲದ ಸಂಕಷ್ಟದ ದಿನಗಳು ಎದುರಾಗಲಿವೆ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ವಾಸ್ತವ ಪರಿಸ್ಥಿತಿಯನ್ನು ಅರಿತು ಆದೇಶ ನೀಡಬೇಕು ಎಂದು ಮನವಿ ಮಾಡಿದರು.
ಇಷ್ಟೊಂದು ಹೋರಾಟ ಮಾಡುವ ನಾವುಗಳು ಮಳೆ ಬಂದರೆ ಎಲ್ಲವನ್ನೂ ಮರೆತು ಬಿಡುತ್ತೇವೆ, ಮಳೆ ಬಂದಾಗಲೂ ನೀರು ಇದ್ದಾಗಲೂ ಮುನ್ನೆಚ್ಚರಿಕೆ ವಹಿಸಿ ಮುನ್ನಡೆಯ ಬೇಕು, ಕಾವೇರಿ ವಿಚಾರದಲ್ಲಿ ಸದಾ ಕಾಲ ಜಾಗೃತಿಯಲ್ಲಿರಬೇಕು ಎಂದರು.
ಸದ್ಯದ ಸಂಕಷ್ಟ ಸ್ಥಿತಿಯಿಂದ ಭುವನೇಶ್ವರಿ ತಾಯಿ, ಚಾಮುಂಡೇಶ್ವರಿ, ಕಾವೇರಿ ಮಾತೆ ಪಾರು ಮಾಡಿ ಕನ್ನಡಿಗರು ಮತ್ತು ರೈತರನ್ನ ಕಾಪಾಡಲಿ ಎಂದು ಹೇಳಿದರು.
ರೈತನ ಸ್ಥಿತಿ ಪ್ರತಿನಿತ್ಯ ಸಂಕಷ್ಟ ಎದುರಿಸುವಂತಾಗಿದೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಇದೀಗ ಬೆಳೆ ಹಾಕದ ಪರಿಸ್ಥಿತಿ ಎದುರಾಗಿದೆ, ಅರಣ್ಯ ಇಲಾಖೆ ರೈತರನ್ನ ಒಕ್ಕಲಿಬ್ಬಿಸುತ್ತಿದೆ, ಕಷ್ಟ ಎಂದು ಜಮೀನು ಮಾರಾಟ ಮಾಡುವಂತದ್ದಲ್ಲ, ಆಳುವ ಸರ್ಕಾರ ರೈತನ ಪರಿಸ್ಥಿತಿ ಅರಿಯಬೇಕೆಂದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…