ಮಂಡ್ಯ

ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ ಹಿರಿಯ ನಟಿ ಲೀಲಾವತಿ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಮತ್ತು ಅವರ ಪುತ್ರ ನಟ ವಿನೋದ್‌ರಾಜ್ ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ನಗರದ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರಿನ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಾಯಿ-ಮಗ ಇಳಿ ವಯಸ್ಸಿನಲ್ಲಿಯೂ ಹೋರಾಟ ಮಾಡುವ ಮೂಲಕ ಕಾವೇರಿ ಚಳುವಳಿಗೆ ಸ್ಫೂರ್ತಿಯಾದರು.
ನಟಿ ಲೀಲಾವತಿ, ವಿನೋದ್ ರಾಜ್ ಬಂದೊಡನೆ ಹಿತರಕ್ಷಣಾ ಸಮಿತಿಯ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡು, ರೈತರ ಹೋರಾಟದಲ್ಲಿ ಭಾಗಿಯಾಗಿರುವುದಕ್ಕೆ ಸಾರ್ಥಕ ಮನೋಭಾವ ವ್ಯಕ್ತಪಡಿಸಿ ಕಾವೇರಿ ಮಾತೆ ರೈತರಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಆಶಿಸಿದರು.

ನಟ ವಿನೋದ್‌ರಾಜ್ ಮಾತನಾಡಿ, ಕನ್ನಂಬಾಡಿಯಿಂದ ಬೆಂಗಳೂರಿನವರೆಗೆ ಕನ್ನಡಿಗರು ಕಾವೇರಿ ನೀರನ್ನು ಆಶ್ರಯಿಸಿ ಬದುಕುತ್ತಿದ್ದಾರೆ, ಪ್ರಸ್ತುತ ಸನ್ನಿವೇಶದಲ್ಲಿ ಮಳೆಯ ಕೊರತೆಯಿಂದ ನೀರಿನ ಭಾವ ಇದೆ,ವರುಣ ಇನ್ನೂ ಸಹ ಕೃಪೆ ತೋರಿಲ್ಲ, ಕಳೆದ ಹಲವಾರು ವರ್ಷದಿಂದ ಕಾವೇರಿ ವಿಚಾರದಲ್ಲಿ ಕರ್ನಾಟಕ ಮತ್ತು ಮಂಡ್ಯ ಜಿಲ್ಲೆಯ ಜನತೆ ಸಾಕಷ್ಟು ನೋವು ಅನುಭವಿಸಿದ್ದು, ಇದು ನೋವಿನ ಸಂಗತಿ ಎಂದರು.

ಕಾವೇರಿ ವಿಚಾರದಲ್ಲಿ ಮಲತಾಯಿ ಧೋರಣೆ ಮುಂದುವರೆದಿದೆ. ನಿರಂತರ ಮೋಸ, ದ್ರೋಹ ಮಾಡಲಾಗಿದೆ, ಇಂತಹ ಸ್ಥಿತಿ ಬರಬಾರದು. ವಾಸ್ತವ ಪರಿಸ್ಥಿತಿಯನ್ನು ಎಲ್ಲರೂ ಅರಿಯಬೇಕು. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಕ್ಷೇಮ ಮುಖ್ಯ, ನೀರಿನ ವಿಚಾರದಲ್ಲಿ ಲೆಕ್ಕಾಚಾರ ಅಲ್ಲ, ನನಗೆಷ್ಟು ನಿಮಗೆಷ್ಟು ಎಂದು ಹೇಳಲಾಗದು ಎಂದರು.

ಕಾವೇರಿ ಹೋರಾಟ ಜಾತ್ಯತೀತ, ಪಕ್ಷಾತೀತವಾದದ್ದು, ಕಾವೇರಿ ನೀರು ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾದದ್ದಲ್ಲ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪರಿಸ್ಥಿತಿಯನ್ನು ಅರಿಯಬೇಕು ಮುಂದಿನ ದಿನಗಳಲ್ಲಿ ಕುಡಿಯಲು ನೀರಿಲ್ಲದ ಸಂಕಷ್ಟದ ದಿನಗಳು ಎದುರಾಗಲಿವೆ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ವಾಸ್ತವ ಪರಿಸ್ಥಿತಿಯನ್ನು ಅರಿತು ಆದೇಶ ನೀಡಬೇಕು ಎಂದು ಮನವಿ ಮಾಡಿದರು.
ಇಷ್ಟೊಂದು ಹೋರಾಟ ಮಾಡುವ ನಾವುಗಳು ಮಳೆ ಬಂದರೆ ಎಲ್ಲವನ್ನೂ ಮರೆತು ಬಿಡುತ್ತೇವೆ, ಮಳೆ ಬಂದಾಗಲೂ ನೀರು ಇದ್ದಾಗಲೂ ಮುನ್ನೆಚ್ಚರಿಕೆ ವಹಿಸಿ ಮುನ್ನಡೆಯ ಬೇಕು, ಕಾವೇರಿ ವಿಚಾರದಲ್ಲಿ ಸದಾ ಕಾಲ ಜಾಗೃತಿಯಲ್ಲಿರಬೇಕು ಎಂದರು.

ಸದ್ಯದ ಸಂಕಷ್ಟ ಸ್ಥಿತಿಯಿಂದ ಭುವನೇಶ್ವರಿ ತಾಯಿ, ಚಾಮುಂಡೇಶ್ವರಿ, ಕಾವೇರಿ ಮಾತೆ ಪಾರು ಮಾಡಿ ಕನ್ನಡಿಗರು ಮತ್ತು ರೈತರನ್ನ ಕಾಪಾಡಲಿ ಎಂದು ಹೇಳಿದರು.
ರೈತನ ಸ್ಥಿತಿ ಪ್ರತಿನಿತ್ಯ ಸಂಕಷ್ಟ ಎದುರಿಸುವಂತಾಗಿದೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಇದೀಗ ಬೆಳೆ ಹಾಕದ ಪರಿಸ್ಥಿತಿ ಎದುರಾಗಿದೆ, ಅರಣ್ಯ ಇಲಾಖೆ ರೈತರನ್ನ ಒಕ್ಕಲಿಬ್ಬಿಸುತ್ತಿದೆ, ಕಷ್ಟ ಎಂದು ಜಮೀನು ಮಾರಾಟ ಮಾಡುವಂತದ್ದಲ್ಲ, ಆಳುವ ಸರ್ಕಾರ ರೈತನ ಪರಿಸ್ಥಿತಿ ಅರಿಯಬೇಕೆಂದರು.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

3 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

3 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

3 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

3 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

3 hours ago