19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ
ಮಂಡ್ಯ : ಮಳವಳ್ಳಿಯಲ್ಲಿ ಪ್ರತ್ಯೇಕವಾಗಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸಿ, 19 ಬೈಕ್ಗಳು ಹಾಗೂ ಚಿನ್ನಾಭರಣ ಸೇರಿದಂತೆ ಸುಮಾರು 34 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಮಳವಳ್ಳಿ ಉಪವಿಭಾಗದ ಪೊಲೀಸರ ತಂಡ ಯಶಸ್ವಿಯಾಗಿದೆ.
ಜ.9ರಂದು ಮಳವಳ್ಳಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದ ಜಾಗದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಟ್ಟಣ ಪೊಲೀಸರು, ಜ.18ರಂದು ಸಂಜೆ ಮಳವಳ್ಳಿ ಪಟ್ಟಣದಲ್ಲಿಯೇ ಮೈಸೂರು ತಾಲ್ಲೂಕು ಕಾಮನಕೆರೆ ಹುಂಡಿ ಗ್ರಾಮದ ಕಾರ್ತಿಕ್ (23), ಮಳವಳ್ಳಿ ತಾಲ್ಲೂಕು ಬಾಣಸಮುದ್ರ ಗ್ರಾಮದ ಸಾಗರ್(23) ಮತ್ತು ಮಳವಳ್ಳಿ ಪಟ್ಟಣದ ಪ್ರಜ್ವಲ್ (23) ಎಂಬುವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ವಿವಿಧ ಕಂಪೆನಿಗೆ ಸೇರಿದ ಬೈಕ್ಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ. ಶೋಭಾರಾಣಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 11, ಕೊಳ್ಳೇಗಾಲ ಪಟ್ಟಣ ಹಾಗೂ ಗ್ರಾಮಾಂತರ ಠಾಣೆಯಲ್ಲಿ ತಲಾ ಎರಡು ಪ್ರಕರಣಗಳು, ಕಿರುಗಾವಲಿನಲ್ಲಿ ಒಂದು, ಮಂಡ್ಯ ಪೂರ್ವ ಠಾಣೆಯಲ್ಲಿ ಎರಡು, ಮೈಸೂರು ನಗರ, ಮಳವಳ್ಳಿ ಟೌನ್ ವ್ಯಾಪ್ತಿಯಲ್ಲಿ ತಲಾ ಒಂದು ಸೇರಿದಂತೆ ಒಟ್ಟು 19 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮೌಲ್ಯ ಏಳು ಲಕ್ಷ ರೂ.ಗಳು ಎಂದು ಎಸ್ಪಿ ಮಾಹಿತಿ ನೀಡಿದರು.
ಈ ಮೂವರು ಹಿಂದೆ ಬಾರ್ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಪರಿಚಯವಾಗಿದ್ದರು. ನಂತರ ಐಷಾರಾಮಿ ಜೀವನಕ್ಕಾಗಿ ಬೈಕ್ ಕಳ್ಳತನಕ್ಕಿಳಿದಿದ್ದರು. ಕಳವು ಮಾಡಿದ ಬೈಕ್ಗಳನ್ನು ಅಡವಿಟ್ಟು ಹಣ ಪಡೆದುಕೊಳ್ಳುತ್ತಿದ್ದರು. ಈ ರೀತಿ ಅಡವಿಟ್ಟುಕೊಂಡಿದ್ದವರಿಂದ ಪೊಲೀಸರು ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಪತ್ತೆ ಮಾಡಿದ ತನಿಖಾ ತಂಡದಲ್ಲಿದ್ದ ಮಳವಳ್ಳಿ ಡಿವೈಎಸ್ಪಿ ಎಸ್.ಬಿ.ಯಶವಂತ್ ಕುಮಾರ್, ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್, ಮಳವಳ್ಳಿ ಪಟ್ಟಣ ಠಾಣೆ ವೃತ್ತ ನಿರೀಕ್ಷಕ ಶಿವಲಿಂಗ ದಳವಾಯಿ, ಎಎಸ್ಐಗಳಾದ ಸುರೇಶ್, ಗೋಪಾಲ್, ಸಿಬ್ಬಂದಿಗಳಾದ ಮಾದೇಶ್, ಮಹದೇವಸ್ವಾಮಿ, ಹರ್ಷವರ್ಧನ್, ಪ್ರಭುಸ್ವಾಮಿ, ರಿಯಾಜ್ಪಾಷಾ, ವಿಕಾಸ್, ಶ್ರೀನಿವಾಸ್ ಮಧುಕಿರಣ್ ತಂಡವನ್ನು ಅಭಿನಂದಿಸಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಇ.ತಿಮ್ಮಯ್ಯ, ಎಸ್.ಇ.ಗಂಗಾಧರಸ್ವಾಮಿ, ಮಳವಳ್ಳಿ ಡಿವೈಎಸ್ಪಿ ಎಸ್.ಬಿ.ಯಶವಂತ್ ಕುಮಾರ್, ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್, ಎಸ್ಐ ಶಿವಲಿಂಗ ದಳವಾಯಿ ಇತರರು ಹಾಜರಿದ್ದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…