ಮಂಡ್ಯ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಐದೂವರೆ ವರ್ಷ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ. ನಾಗಜ್ಯೋತಿ ತೀರ್ಪು ನೀಡಿದ್ದಾರೆ.
ತಾಲ್ಲೂಕಿನ ಕೊಮ್ಮೇರಹಳ್ಳಿ ಗ್ರಾಮದ ಗಿರೀಶ ಶಿಕ್ಷೆಗೊಳಗಾದ ಆರೋಪಿ. ಕಳೆದ 2021 ಮಾ.3ರ ರಾತ್ರಿ 10.30ರ ಸಮಯದಲ್ಲಿ ಗ್ರಾಮದ ಹಿರಿಯಮ್ಮ ದೇವಿ ದೇವಸ್ಥಾನಕ್ಕೆ ಕೊಮ್ಮೇರಹಳ್ಳಿ -ಎಚ್.ಕೋಡಿಹಳ್ಳಿ ಗ್ರಾಮದ ರಸ್ತೆಯಲ್ಲಿ ಗ್ರಾಮಸ್ಥರ ಜತೆ ಆರತಿಯನ್ನು ತೆಗೆದುಕೊಂಡು ಹೋಗುತ್ತಿದ್ದಾಗ 12 ವರ್ಷದ ಬಾಲಕಿ ಎಲ್ಲರಿಗಿಂತ ಹಿಂದೆ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಗಿರೀಶ ಈಕೆಯನ್ನು ಹಿಂಬಾಲಿಸಿಕೊಂಡು ಬಿಸ್ಕತ್ ಮತ್ತು ಚಾಕೋಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿ, ಯಾರಿಗಾದರೂ ಹೇಳಿದರೆ ಬಾಲಕಿ ಮತ್ತು ಆಕೆಯ ತಂದೆಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದನು.
ಆದರೂ ಈ ಬಾಲಕಿ ಪೋಷಕರಿಗೆ ಈ ವಿಷಯವನ್ನು ಹೇಳಲಾಗಿ, ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿ, ಅಂದಿನ ಇನ್ಸ್ಪೆಕ್ಟರ್ ಆನಂದೇಗೌಡ ಅವರು ಆರೋಪಿಯನ್ನು ಬಂಧಿಸಿ, ಭಾದಂಸಂ 363, 354(ಡಿ), 375, 506 ಐಪಿಸಿ & ಕಲಂ 4, 8, 10, 12 ಪೋಕ್ಸೋ ಕಾಯಿದೆ 2012ರ ಅಡಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಪ್ರಕರಣವು ಸ್ಪೆಷಲ್ ಕೇಸ್ ಸಂಖ್ಯೆ 80/2021 ರಂತೆ ಮಂಡ್ಯದ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರು ಆರೋಪಿ ಗಿರೀಶನಿಗೆ ಈತನಿಗೆ ಭಾದಂಸಂ ಕಲಂ 362 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಶಿಕ್ಷೆ ಮತ್ತು 10,000 ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ಹಾಗೂ ಭಾದಂಸಂ ಕಲಂ 506 ಅಡಿಯಲ್ಲಿನ ಅಪರಾಧಕ್ಕೆ 6 ತಿಂಗಳ ಶಿಕ್ಷೆ ಮತ್ತು 5,000 ರೂ.ಗಳ ದಂಡ, ಪಾವತಿಸಲು ತಪ್ಪಿದಲ್ಲಿ 9 ತಿಂಗಳು ಸಾದಾ ಶಿಕ್ಷೆಯನ್ನು ಹಾಗೂ ಭಾದಂಸಂ ಪೋಕ್ಸೋ ಕಲಂ 8 ಅಡಿಯಲ್ಲಿನ ಅಪರಾಧಕ್ಕೆ 3 ವರ್ಷಗಳ ಶಿಕ್ಷೆ ಮತ್ತು 15,000 ರೂ.ಗಳ ದಂಡ, ಪಾವತಿಸಲು ತಪ್ಪಿದಲ್ಲಿ 9 ತಿಂಗಳು ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…