ಮಂಡ್ಯ

ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಗೆ ಶಿಕ್ಷೆ

ಮಂಡ್ಯ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಐದೂವರೆ ವರ್ಷ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ. ನಾಗಜ್ಯೋತಿ ತೀರ್ಪು ನೀಡಿದ್ದಾರೆ.

ತಾಲ್ಲೂಕಿನ ಕೊಮ್ಮೇರಹಳ್ಳಿ ಗ್ರಾಮದ ಗಿರೀಶ ಶಿಕ್ಷೆಗೊಳಗಾದ ಆರೋಪಿ. ಕಳೆದ 2021 ಮಾ.3ರ ರಾತ್ರಿ 10.30ರ ಸಮಯದಲ್ಲಿ ಗ್ರಾಮದ ಹಿರಿಯಮ್ಮ ದೇವಿ ದೇವಸ್ಥಾನಕ್ಕೆ ಕೊಮ್ಮೇರಹಳ್ಳಿ -ಎಚ್.ಕೋಡಿಹಳ್ಳಿ ಗ್ರಾಮದ ರಸ್ತೆಯಲ್ಲಿ ಗ್ರಾಮಸ್ಥರ ಜತೆ ಆರತಿಯನ್ನು ತೆಗೆದುಕೊಂಡು ಹೋಗುತ್ತಿದ್ದಾಗ 12 ವರ್ಷದ ಬಾಲಕಿ ಎಲ್ಲರಿಗಿಂತ ಹಿಂದೆ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಗಿರೀಶ ಈಕೆಯನ್ನು ಹಿಂಬಾಲಿಸಿಕೊಂಡು ಬಿಸ್ಕತ್ ಮತ್ತು ಚಾಕೋಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿ, ಯಾರಿಗಾದರೂ ಹೇಳಿದರೆ ಬಾಲಕಿ ಮತ್ತು ಆಕೆಯ ತಂದೆಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದನು.

ಆದರೂ ಈ ಬಾಲಕಿ ಪೋಷಕರಿಗೆ ಈ ವಿಷಯವನ್ನು ಹೇಳಲಾಗಿ, ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿ, ಅಂದಿನ ಇನ್‌ಸ್ಪೆಕ್ಟರ್ ಆನಂದೇಗೌಡ ಅವರು ಆರೋಪಿಯನ್ನು ಬಂಧಿಸಿ, ಭಾದಂಸಂ 363, 354(ಡಿ), 375, 506 ಐಪಿಸಿ & ಕಲಂ 4, 8, 10, 12 ಪೋಕ್ಸೋ ಕಾಯಿದೆ 2012ರ ಅಡಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣವು ಸ್ಪೆಷಲ್ ಕೇಸ್ ಸಂಖ್ಯೆ 80/2021 ರಂತೆ ಮಂಡ್ಯದ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರು ಆರೋಪಿ ಗಿರೀಶನಿಗೆ ಈತನಿಗೆ ಭಾದಂಸಂ ಕಲಂ 362 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಶಿಕ್ಷೆ ಮತ್ತು 10,000 ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ಹಾಗೂ ಭಾದಂಸಂ ಕಲಂ 506 ಅಡಿಯಲ್ಲಿನ ಅಪರಾಧಕ್ಕೆ 6 ತಿಂಗಳ ಶಿಕ್ಷೆ ಮತ್ತು 5,000 ರೂ.ಗಳ ದಂಡ, ಪಾವತಿಸಲು ತಪ್ಪಿದಲ್ಲಿ 9 ತಿಂಗಳು ಸಾದಾ ಶಿಕ್ಷೆಯನ್ನು ಹಾಗೂ ಭಾದಂಸಂ ಪೋಕ್ಸೋ ಕಲಂ 8 ಅಡಿಯಲ್ಲಿನ ಅಪರಾಧಕ್ಕೆ 3 ವರ್ಷಗಳ ಶಿಕ್ಷೆ ಮತ್ತು 15,000 ರೂ.ಗಳ ದಂಡ, ಪಾವತಿಸಲು ತಪ್ಪಿದಲ್ಲಿ 9 ತಿಂಗಳು ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದರು.

lokesh

Recent Posts

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

2 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

3 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

9 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

9 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

9 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

9 hours ago