ಮಂಡ್ಯ

ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಗೆ ಶಿಕ್ಷೆ

ಮಂಡ್ಯ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಐದೂವರೆ ವರ್ಷ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ. ನಾಗಜ್ಯೋತಿ ತೀರ್ಪು ನೀಡಿದ್ದಾರೆ.

ತಾಲ್ಲೂಕಿನ ಕೊಮ್ಮೇರಹಳ್ಳಿ ಗ್ರಾಮದ ಗಿರೀಶ ಶಿಕ್ಷೆಗೊಳಗಾದ ಆರೋಪಿ. ಕಳೆದ 2021 ಮಾ.3ರ ರಾತ್ರಿ 10.30ರ ಸಮಯದಲ್ಲಿ ಗ್ರಾಮದ ಹಿರಿಯಮ್ಮ ದೇವಿ ದೇವಸ್ಥಾನಕ್ಕೆ ಕೊಮ್ಮೇರಹಳ್ಳಿ -ಎಚ್.ಕೋಡಿಹಳ್ಳಿ ಗ್ರಾಮದ ರಸ್ತೆಯಲ್ಲಿ ಗ್ರಾಮಸ್ಥರ ಜತೆ ಆರತಿಯನ್ನು ತೆಗೆದುಕೊಂಡು ಹೋಗುತ್ತಿದ್ದಾಗ 12 ವರ್ಷದ ಬಾಲಕಿ ಎಲ್ಲರಿಗಿಂತ ಹಿಂದೆ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಗಿರೀಶ ಈಕೆಯನ್ನು ಹಿಂಬಾಲಿಸಿಕೊಂಡು ಬಿಸ್ಕತ್ ಮತ್ತು ಚಾಕೋಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿ, ಯಾರಿಗಾದರೂ ಹೇಳಿದರೆ ಬಾಲಕಿ ಮತ್ತು ಆಕೆಯ ತಂದೆಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದನು.

ಆದರೂ ಈ ಬಾಲಕಿ ಪೋಷಕರಿಗೆ ಈ ವಿಷಯವನ್ನು ಹೇಳಲಾಗಿ, ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿ, ಅಂದಿನ ಇನ್‌ಸ್ಪೆಕ್ಟರ್ ಆನಂದೇಗೌಡ ಅವರು ಆರೋಪಿಯನ್ನು ಬಂಧಿಸಿ, ಭಾದಂಸಂ 363, 354(ಡಿ), 375, 506 ಐಪಿಸಿ & ಕಲಂ 4, 8, 10, 12 ಪೋಕ್ಸೋ ಕಾಯಿದೆ 2012ರ ಅಡಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣವು ಸ್ಪೆಷಲ್ ಕೇಸ್ ಸಂಖ್ಯೆ 80/2021 ರಂತೆ ಮಂಡ್ಯದ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರು ಆರೋಪಿ ಗಿರೀಶನಿಗೆ ಈತನಿಗೆ ಭಾದಂಸಂ ಕಲಂ 362 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಶಿಕ್ಷೆ ಮತ್ತು 10,000 ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ಹಾಗೂ ಭಾದಂಸಂ ಕಲಂ 506 ಅಡಿಯಲ್ಲಿನ ಅಪರಾಧಕ್ಕೆ 6 ತಿಂಗಳ ಶಿಕ್ಷೆ ಮತ್ತು 5,000 ರೂ.ಗಳ ದಂಡ, ಪಾವತಿಸಲು ತಪ್ಪಿದಲ್ಲಿ 9 ತಿಂಗಳು ಸಾದಾ ಶಿಕ್ಷೆಯನ್ನು ಹಾಗೂ ಭಾದಂಸಂ ಪೋಕ್ಸೋ ಕಲಂ 8 ಅಡಿಯಲ್ಲಿನ ಅಪರಾಧಕ್ಕೆ 3 ವರ್ಷಗಳ ಶಿಕ್ಷೆ ಮತ್ತು 15,000 ರೂ.ಗಳ ದಂಡ, ಪಾವತಿಸಲು ತಪ್ಪಿದಲ್ಲಿ 9 ತಿಂಗಳು ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದರು.

lokesh

Recent Posts

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

50 mins ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

6 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

23 hours ago