ಮಂಡ್ಯ:ಐದು ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿ ಹೊಂದಿರುವ ಮಂಡ್ಯದ ಡಾ. ಶಂಕರೇಗೌಡ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ದೊರಕಿದೆ. ಖಾಸಗಿ ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್ ದಿ ಇಯರ್-2022’ ದಿಲ್ಲಿಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೈದ್ಯ ಡಾ.ಶಂಕರೇಗೌಡ, ದೇಶದ ಗ್ರಾಮೀಣ ಭಾಗಗಳಲ್ಲಿ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೇವೆ ಸರಿಯಾಗಿ ದೊರಕುತ್ತಿಲ್ಲ .‘ನಾನು 1982ರಿಂದ ಅಭ್ಯಾಸ ಮಾಡುತ್ತಿದ್ದೇನೆ. ಅಂದಿನಿಂದ ಇಂದಿನವರೆಗೆ 40 ವರ್ಷಗಳಿಂದ 5 ರೂಪಾಯಿ ಶುಲ್ಕ ಹಾಕುತ್ತೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾನವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ನನ್ನ ಜನರಿಗೆ ನೀಡಬೇಕು ಎನ್ನುವ ಉದ್ದೇಶದಿಂದ ಪದವಿ ಪಡೆದ ನಂತರ ನನ್ನ ಊರಿನಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದೆ ಎಂದು ಹೇಳಿದರು.
ಅಲ್ಲದೇ, ‘ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವೈದ್ಯರಿದ್ದಾರೆ. ಆದರೆ ಗ್ರಾಮೀಣ ಪ್ರದೇಗಳಲ್ಲಿ ವೈದ್ಯರ ಕೊರತೆಯಿದೆ. ಹಾಗಾಗಿ ಸರ್ಕಾರವು ವೈದ್ಯರಿಗೆ ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ಅಭ್ಯಾಸ ಮಾಡಬೇಕು’ ಎಂದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…