ಮಂಡ್ಯ

5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಒಲಿದ ‘ಇಂಡಿಯನ್ ಆಫ್‌ ದಿ ಇಯರ್-2022

ಮಂಡ್ಯ:ಐದು ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿ ಹೊಂದಿರುವ ಮಂಡ್ಯದ ಡಾ. ಶಂಕರೇಗೌಡ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ದೊರಕಿದೆ. ಖಾಸಗಿ ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್‌ ದಿ ಇಯರ್-2022’ ದಿಲ್ಲಿಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ‘ಇಂಡಿಯನ್ ಆಫ್‌ ದಿ ಇಯರ್-2022’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೈದ್ಯ ಡಾ.ಶಂಕರೇಗೌಡ, ದೇಶದ ಗ್ರಾಮೀಣ ಭಾಗಗಳಲ್ಲಿ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೇವೆ ಸರಿಯಾಗಿ ದೊರಕುತ್ತಿಲ್ಲ .‘ನಾನು 1982ರಿಂದ ಅಭ್ಯಾಸ ಮಾಡುತ್ತಿದ್ದೇನೆ. ಅಂದಿನಿಂದ ಇಂದಿನವರೆಗೆ 40 ವರ್ಷಗಳಿಂದ 5 ರೂಪಾಯಿ ಶುಲ್ಕ ಹಾಕುತ್ತೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾನವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ನನ್ನ ಜನರಿಗೆ ನೀಡಬೇಕು ಎನ್ನುವ ಉದ್ದೇಶದಿಂದ ಪದವಿ ಪಡೆದ ನಂತರ ನನ್ನ ಊರಿನಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದೆ ಎಂದು ಹೇಳಿದರು.

ಅಲ್ಲದೇ, ‘ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವೈದ್ಯರಿದ್ದಾರೆ. ಆದರೆ ಗ್ರಾಮೀಣ ಪ್ರದೇಗಳಲ್ಲಿ ವೈದ್ಯರ ಕೊರತೆಯಿದೆ. ಹಾಗಾಗಿ ಸರ್ಕಾರವು ವೈದ್ಯರಿಗೆ ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ಅಭ್ಯಾಸ ಮಾಡಬೇಕು’ ಎಂದರು.

andolana

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

2 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

2 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

2 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

2 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

2 hours ago