ಮಂಡ್ಯ

ಧಾರ್ಮಿಕ ಕಾರಿಡಾರ್‌ಗಳ ಅಭಿವೃದ್ದಿಯತ್ತ ಚಿಂತನೆ: ಶಶಿಕಲಾ ಜೊಲ್ಲೆ

ಕೆ ಆರ್‌ ಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‌ ಗಳ ಅಭಿವೃದ್ದಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದರು.

ಕೆ ಆರ್‌ ಪೇಟೆಯಲ್ಲಿ ದಕ್ಷಿಣ ಭಾರತದ ಮಹಾಕುಂಭಮೇಳವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ. ಮಲೆ ಮಹದೇಶ್ವರರು ಶ್ರೀಶೈಲದಿಂದ ಬಂದಾಗ ಪಾದಸ್ಪರ್ಶ ಮಾಡಿದ್ದ ಪವಿತ್ರ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಬಹಳ ವಿಶೇಷ. ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಧಾರ್ಮಿಕ ಸಂಸ್ಕೃತಿಯನ್ನ ಜನ ಮಾನಸದಲ್ಲಿ ಬಿತ್ತಿ ಬೆಳೆಸುವ ಕಾರ್ಯ ನಡೆಸಲಾಗುತ್ತಿದೆ. ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಸರಕಾರವೂ ಚಿಂತನೆ ನಡೆಸಿದ್ದು, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.

 

andolana

Recent Posts

ಕುಕ್ಕರಿನ ಶೀಟಿ ತರಹದ ಜಿರಲೆ ಹೋರಾಟ

ಸುರೇಶ ಕಂಜರ್ಪಣೆ ಜಿರಲೆ ಪಕ್ಷದ ಹುಟ್ಟು ಮತ್ತು ಅದರ ಇತ್ತೀಚಿಗಿನ ಚಳವಳಿ ಕುರಿತು ವರ್ಣರಂಜಿತ ಊಹಾಪೋಹ, ವಿಶ್ಲೇಷಣೆಗಳು ನಡೆದಿವೆ. ಇವೆಲ್ಲಾ…

43 seconds ago

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

3 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

3 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

3 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

17 hours ago