ಮಂಡ್ಯ

ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಿ: ಜಿಪಂ ಸಿಇಒ ಶೇಕ್ ತನ್ವೀರ್ ಆಸೀಫ್

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ಇಂದು (ಜುಲೈ.5) ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಡೆಂಗಿ ನಿಯಂತ್ರಣ ಕುರಿತು ವೀಡಿಯೋ ಸಂವಾದ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 189 ಡೆಂಗ್ಯೂ ಪ್ರಕರಣಗಳು: 2024 ನೇ ಸಾಲಿನಲ್ಲಿ ಜೂನ್ ವರೆಗೆ ಜಿಲ್ಲೆಯಲ್ಲಿ ಒಟ್ಟು 189 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಮಂಡ್ಯ ತಾಲ್ಲೂಕಿನಲ್ಲಿ- 89, ಮದ್ದೂರು ತಾಲ್ಲೂಕಿನಲ್ಲಿ- 34, ಮಳವಳ್ಳಿ ತಾಲ್ಲೂಕಿನಲ್ಲಿ-14, ಪಾಂಡವಪುರ- 18, ಶ್ರೀರಂಗಪಟ್ಟಣ- 16, ಕೆ.ಆರ್. ಪೇಟೆ- 9, ನಾಗಮಂಗಲ ತಾಲ್ಲೂಕಿನಲ್ಲಿ- 9 ಪ್ರಕರಣಗಳು ದಾಖಲಾಗಿದ್ದು ಸಾರ್ವಜನಿಕರು ಮುನ್ನಚ್ಚರಿಕಾ ಕ್ರಮಗಳನ್ನು ವಹಿಸಿ ಎಂದರು.

ಸ್ಥಳೀಯ ಸಂಸ್ಥೆಗಳು ಕಸ ವಿಲೇವಾರಿ ಮಾಡುವ ವಾಹನದಲ್ಲಿ ದಿನವು ಡೆಂಗ್ಯೂ ನಿಯಂತ್ರಣದ ಬಗ್ಗೆ ನೀಡಿರುವ ಆಡಿಯೋ ತುಣುಕುಗಳನ್ನು ಪ್ರಸಾರ ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ನಿಯಮಿತ ಹಾಗೂ ಸಮರ್ಪಕ ನೀರು ಸರಬರಾಜು, ನೀರು ಸರಬರಾಜಾಗುವ ನಲ್ಲಿ, ಪೈಪುಗಳು ಸೋರದಂತೆ ನೋಡಿಕೊಳ್ಳಬೇಕು, ಕೊಳವೆ ಬಾವಿಗಳು ಹಾಗೂ ನಲ್ಲಿ ಪೈಪುಗಳು ಒಳಚರಂಡಿ ಜಾಗದಿಂದ ದೂರದಲ್ಲಿರುವಂತೆ ನಿರ್ಮಿಸಬೇಕು ಎಂದರು.

ಮೇಲ್ಚಾವಣಿಯ ತೊಟ್ಟಿಗಳು ಹಾಗೂ ನೀರು ಸರಬಾರಾಜು ಮಾಡುವ ತೊಟ್ಟಿಗಳನ್ನು ಭದ್ರವಾದ ಮುಚ್ಚಳದಿಂದ ಮುಚ್ಚುವ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ಗ್ರಾಮದ ನೈರ್ಮಲ್ಯತೆ ಹಾಗೂ ಗ್ರಾಮದಲ್ಲಿರಬಹುದಾದ ಸಾಂಕ್ರಾಮಿಕ ರೋಗಗಳ ಪರಿಸ್ಥಿತಿ ಹಾಗೂ ಹತೋಟಿಯ ಬಗ್ಗೆ ಚರ್ಚಿಸಬೇಕು‌ ಎಂದರು. ಹಾಗೂ ಗ್ರಾಮ ಪಂಚಾಯತಿಗಳು ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ನಡೆಸಬೇಕು ಎಂದರು.

ಶಿಕ್ಷಣ ಇಲಾಖೆಗಳಲ್ಲಿ ಶಾಲಾ ಪ್ರಾರ್ಥನಾ ವೇಳೆಯಲ್ಲಿ ಡೆಂಗೀ ನಿಯಂತ್ರಣದ ಕುರಿತು ಕರಪತ್ರಗಳನ್ನು ವಿದ್ಯಾರ್ಥಿಗಳತ್ತಿರ ಓದಿಸಬೇಕು ಮತ್ತು ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು‌. ಸೊಳ್ಳೆಗಳಿಂದ ಹರಡುವ ಮತ್ತು ಇತರೆ ಸಾಂಕ್ರಾಮಿಕ ರೋಗಗಳ ಮತ್ತು ಅವುಗಳ ನಿಯಂತ್ರಣ ಬಗ್ಗೆ ಜಾಗೃತಿ ಮೂಡಿಸಿ ಎಂದರು.

ಶಾಲಾ ಆವರಣವನ್ನು ಸೊಳ್ಳೆ ಉತ್ಪತ್ತಿ ಮುಕ್ತವಾಗಿಡುವುದಲ್ಲದೇ ಸ್ವಚ್ಛತೆ ಹಾಗೂ ನೈರ್ಮಲ್ಯತೆಯನ್ನು ಕಾಪಾಡಬೇಕು ಮತ್ತು ಶಾಲೆಯಲ್ಲಿ ಯಾವುದೇ ಜ್ವರ ಪ್ರಕರಣವಿದ್ದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತಿಳಿಸುವುದು ಹಾಗೂ ಸಾಮೂಹಿಕ ಜ್ವರ ಪ್ರಕರಣಗಳು ಕಂಡುಬಂದಲ್ಲಿ ತಪ್ಪದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಿಳಿಸಬೇಕು ಎಂದರು.

ಅಂಗನವಾಡಿ ಕಾರ್ಯಕರ್ತರು ವೈಯುಕ್ತಿಕ ರಕ್ಷಣೆ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಅಂಗನವಾಡಿ ಆವರಣವನ್ನು ಸೊಳ್ಳೆ ಉತ್ಪತ್ತಿ ಮುಕ್ತವಾಗಿಡುವುದೇ ಅಲ್ಲದೆ ಸ್ವಚ್ಛತೆ ಹಾಗೂ ನೈರ್ಮಲ್ಯತೆಯಿಂದ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್ ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago