ಮಂಡ್ಯ

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಇಂದು ಮುಂಜಾನೆ ಮೂರು ಗಂಟೆಯ ಸಮಯದಲ್ಲಿ ಶಫೀ ಉಲ್ಲಾ ಅವರ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಅಂಗಡಿಯೊಳಗಿದ್ದ ಮೊಬೈಲ್ ಫೋನುಗಳು, ಮಿಕ್ಸಿಗಳು, ಫ್ಯಾನುಗಳು, ಎಲ್ಇಡಿ ಬಲ್ಬುಗಳು, ಗ್ಯಾಸ್ ಸ್ಟವ್ ಗಳು ಸೇರಿದಂತೆ ಅಂಗಡಿ ಒಳಗಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.

ಪಿ.ಎಲ್.ಡಿ ಬ್ಯಾಂಕ್ ಮುಂಭಾಗದ ರಸ್ತೆಗೆರೆ ಅಡ್ಡಾಡುತ್ತಿದ್ದ ಸಾರ್ವಜನಿಕರು ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ ಹತ್ತಿಕೊಂಡಿರುವುದನ್ನು ಗಮನಿಸಿ, ಅಗ್ನಿಶಾಮಕ ಠಾಣೆಗೆ ಸುದ್ದಿ ನೀಡಿದ ತಕ್ಷಣ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಬೆಂಕಿ ನಂದಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸಿದರೂ ಅಂಗಡಿಯೊಳಗಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದ್ದವು. ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ಸ್ ಉಪಕರಣಗಳ ಅಂಗಡಿಯು ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿರುವ ಬಗ್ಗೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ತಾಲೂಕು ಆಡಳಿತದ ಮುಖ್ಯಸ್ಥರಾದ ತಹಶೀಲ್ದಾರ್ ಅವರಿಗೆ ಹಾಗೂ ಪುರಸಭೆ ಮುಖ್ಯ ಅಧಿಕಾರಿಗಳಿಗೆ ಶಫಿವುಲ್ಲಾ ಅವರು ದೂರು ನೀಡಿದ್ದಾರೆ.

ಎಲೆಕ್ಟ್ರಾನಿಕ್ಸ್ ಅಂಗಡಿಯನ್ನೇ ಜೀವನಧಾರವನ್ನಾಗಿ ಮಾಡಿಕೊಂಡು ಕೆಆರ್ ಪೇಟೆ ಪಟ್ಟಣದಲ್ಲಿ ವಾಸವಾಗಿದ್ದ ಶಫಿವುಲ್ಲಾ ಅವರು ಜೀವನ ನಿರ್ವಹಣೆಗೆ ತುಂಬಾ ತೊಂದರೆಯಾಗಿದೆ ಆದ್ದರಿಂದ ತಾಲೂಕು ಆಡಳಿತವೂ ಸರ್ಕಾರದ ವತಿಯಿಂದ ಪರಿಹಾರವನ್ನು ದೊರಕಿಸಿ ಕೊಡಬೇಕು ಎಂದು ಮುಸ್ಲಿಂ ಮುಖಂಡ ನಜೀಬುಲ್ಲಾ ಅವರು ತಹಶೀಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

3 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

4 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

4 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

5 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

5 hours ago

ಹೂಫ್‌ಬೀಟ್ ಮ್ಯಾರಥಾನ್ : ಮೈಸೂರು ವಿದ್ಯಾರ್ಥಿಗಳ ಸಾಧನೆ

ಮೈಸೂರು : ಮಹಾರಾಷ್ಟ್ರದ ಕಾರ್ಜತ್‌ನಲ್ಲಿ ಇತ್ತೀಚೆಗೆ ನಡೆದ ಹೂಫ್‌ಬೀಟ್ ಮ್ಯಾರಥಾನ್ - ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಚಾಮುಂಡಿ…

5 hours ago