ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಇಂದು ಮುಂಜಾನೆ ಮೂರು ಗಂಟೆಯ ಸಮಯದಲ್ಲಿ ಶಫೀ ಉಲ್ಲಾ ಅವರ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಅಂಗಡಿಯೊಳಗಿದ್ದ ಮೊಬೈಲ್ ಫೋನುಗಳು, ಮಿಕ್ಸಿಗಳು, ಫ್ಯಾನುಗಳು, ಎಲ್ಇಡಿ ಬಲ್ಬುಗಳು, ಗ್ಯಾಸ್ ಸ್ಟವ್ ಗಳು ಸೇರಿದಂತೆ ಅಂಗಡಿ ಒಳಗಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.
ಪಿ.ಎಲ್.ಡಿ ಬ್ಯಾಂಕ್ ಮುಂಭಾಗದ ರಸ್ತೆಗೆರೆ ಅಡ್ಡಾಡುತ್ತಿದ್ದ ಸಾರ್ವಜನಿಕರು ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ ಹತ್ತಿಕೊಂಡಿರುವುದನ್ನು ಗಮನಿಸಿ, ಅಗ್ನಿಶಾಮಕ ಠಾಣೆಗೆ ಸುದ್ದಿ ನೀಡಿದ ತಕ್ಷಣ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಬೆಂಕಿ ನಂದಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸಿದರೂ ಅಂಗಡಿಯೊಳಗಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದ್ದವು. ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ಸ್ ಉಪಕರಣಗಳ ಅಂಗಡಿಯು ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿರುವ ಬಗ್ಗೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ತಾಲೂಕು ಆಡಳಿತದ ಮುಖ್ಯಸ್ಥರಾದ ತಹಶೀಲ್ದಾರ್ ಅವರಿಗೆ ಹಾಗೂ ಪುರಸಭೆ ಮುಖ್ಯ ಅಧಿಕಾರಿಗಳಿಗೆ ಶಫಿವುಲ್ಲಾ ಅವರು ದೂರು ನೀಡಿದ್ದಾರೆ.
ಎಲೆಕ್ಟ್ರಾನಿಕ್ಸ್ ಅಂಗಡಿಯನ್ನೇ ಜೀವನಧಾರವನ್ನಾಗಿ ಮಾಡಿಕೊಂಡು ಕೆಆರ್ ಪೇಟೆ ಪಟ್ಟಣದಲ್ಲಿ ವಾಸವಾಗಿದ್ದ ಶಫಿವುಲ್ಲಾ ಅವರು ಜೀವನ ನಿರ್ವಹಣೆಗೆ ತುಂಬಾ ತೊಂದರೆಯಾಗಿದೆ ಆದ್ದರಿಂದ ತಾಲೂಕು ಆಡಳಿತವೂ ಸರ್ಕಾರದ ವತಿಯಿಂದ ಪರಿಹಾರವನ್ನು ದೊರಕಿಸಿ ಕೊಡಬೇಕು ಎಂದು ಮುಸ್ಲಿಂ ಮುಖಂಡ ನಜೀಬುಲ್ಲಾ ಅವರು ತಹಶೀಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…