ಮಂಡ್ಯ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ: ಅಭಿಮಾನಿಗಳಿಗೆ ಧಿಲ್‌ ಖುಷ್

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾಕ್ಕೆ ಕಿರಂಗೂರಿನ ಬನ್ನಿಮಂಟಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ ಡಾ.ಶಿವರಾಜ್‌ಕುಮಾರ್‌ ಚಾಲನೆ ನೀಡಿದ್ದು, ಬಳಿಕ ಶ್ರೀರಂಗದೇವಾಲಯದ ಮುಂಭಾಗ ವೇದಿಕೆ ಕಾರ್ಯಕ್ರಮಕ್ಕೆ ಶಿವರಾಜ್‌ ಕುಮಾರ್‌ ಆಗಮಿಸುತ್ತಿದ್ದಂತೆ, ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳು ಜೈಕಾರ ಹಾಕಿದರು.

ವೇದಿಕೆಯಲ್ಲಿ ಶಿವಣ್ಣ ನಟನೆಯ ಬೈರತಿ ರಣಗಲ್‌ ಚಿತ್ರದ ಟೀಸರ್‌ ಪ್ರದರ್ಶನ್‌ ಮಾಡಲಾಯಿತು.

ಶ್ರೀರಂಗಪಟ್ಟಣ, ಮೈಸೂರು ಅದೃಷ್ಟದ ಸ್ಥಳ

ಬಳಿಕ ಮಾತನಾಡಿದ ಅವರು, ಬಹಳಷ್ಟು ಚಲನಚಿತ್ರಗಳನ್ನು ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ಮಾಡಲಾಗಿದೆ. ಶ್ರೀರಂಗಪಟ್ಟಣದಲ್ಲಿ ಅಭಿಮಾನಿಗಳು, ಬಂಧುಬಳಗ ಹೆಚ್ಚು, ಶ್ರೀರಂಗಪಟ್ಟಣ ಹಾಗೂ ಮೈಸೂರು ನನಗೆ ಅದೃಷ್ಟದ ಸ್ಥಳಗಳಾಗಿದ್ದು, ಇಲ್ಲಿ ಮಾಡುವ ಚಲನಚಿತ್ರಗಳು ಯಶಸ್ವಿಯಾಗಿದೆ ಎಂದು ನುಡಿದರು.

ಯಾವುದೇ ಜಾತಿ, ಮತ, ಪಂಥಗಳಿಗೆ ಹಬ್ಬ ಮೀಸಲಾಗದೇ ಎಲ್ಲರೂ ಒಟ್ಟಿಗೆ ಭಾಗವಹಿಸಿ ಆಚರಿಸುವ ಹಬ್ಬವೇ ದಸರಾ ಹಬ್ಬವಾಗಿದೆ. ಈ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿದರು.

ನಂತರ, ಹಸಿದಾಗ ಅನ್ನ ದಣಿದಾಗ ನೀರು, ಇವನ್ಯಾರ ಮಗನೋ, ಯಾರೇ ಕೂಗಾಡಲಿ, ಗೊಂಬೆ ಹೇಳುತೈತೆ ಹಾಡುಗಳನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

10 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

10 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

11 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

12 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

12 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

12 hours ago