ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾಕ್ಕೆ ಕಿರಂಗೂರಿನ ಬನ್ನಿಮಂಟಪದಲ್ಲಿ ಸ್ಯಾಂಡಲ್ವುಡ್ ಖ್ಯಾತ ನಟ ಡಾ.ಶಿವರಾಜ್ಕುಮಾರ್ ಚಾಲನೆ ನೀಡಿದ್ದು, ಬಳಿಕ ಶ್ರೀರಂಗದೇವಾಲಯದ ಮುಂಭಾಗ ವೇದಿಕೆ ಕಾರ್ಯಕ್ರಮಕ್ಕೆ ಶಿವರಾಜ್ ಕುಮಾರ್ ಆಗಮಿಸುತ್ತಿದ್ದಂತೆ, ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳು ಜೈಕಾರ ಹಾಕಿದರು.
ವೇದಿಕೆಯಲ್ಲಿ ಶಿವಣ್ಣ ನಟನೆಯ ಬೈರತಿ ರಣಗಲ್ ಚಿತ್ರದ ಟೀಸರ್ ಪ್ರದರ್ಶನ್ ಮಾಡಲಾಯಿತು.
ಶ್ರೀರಂಗಪಟ್ಟಣ, ಮೈಸೂರು ಅದೃಷ್ಟದ ಸ್ಥಳ
ಬಳಿಕ ಮಾತನಾಡಿದ ಅವರು, ಬಹಳಷ್ಟು ಚಲನಚಿತ್ರಗಳನ್ನು ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ಮಾಡಲಾಗಿದೆ. ಶ್ರೀರಂಗಪಟ್ಟಣದಲ್ಲಿ ಅಭಿಮಾನಿಗಳು, ಬಂಧುಬಳಗ ಹೆಚ್ಚು, ಶ್ರೀರಂಗಪಟ್ಟಣ ಹಾಗೂ ಮೈಸೂರು ನನಗೆ ಅದೃಷ್ಟದ ಸ್ಥಳಗಳಾಗಿದ್ದು, ಇಲ್ಲಿ ಮಾಡುವ ಚಲನಚಿತ್ರಗಳು ಯಶಸ್ವಿಯಾಗಿದೆ ಎಂದು ನುಡಿದರು.
ಯಾವುದೇ ಜಾತಿ, ಮತ, ಪಂಥಗಳಿಗೆ ಹಬ್ಬ ಮೀಸಲಾಗದೇ ಎಲ್ಲರೂ ಒಟ್ಟಿಗೆ ಭಾಗವಹಿಸಿ ಆಚರಿಸುವ ಹಬ್ಬವೇ ದಸರಾ ಹಬ್ಬವಾಗಿದೆ. ಈ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿದರು.
ನಂತರ, ಹಸಿದಾಗ ಅನ್ನ ದಣಿದಾಗ ನೀರು, ಇವನ್ಯಾರ ಮಗನೋ, ಯಾರೇ ಕೂಗಾಡಲಿ, ಗೊಂಬೆ ಹೇಳುತೈತೆ ಹಾಡುಗಳನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…