ಮಂಡ್ಯ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ: ಅಭಿಮಾನಿಗಳಿಗೆ ಧಿಲ್‌ ಖುಷ್

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾಕ್ಕೆ ಕಿರಂಗೂರಿನ ಬನ್ನಿಮಂಟಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ ಡಾ.ಶಿವರಾಜ್‌ಕುಮಾರ್‌ ಚಾಲನೆ ನೀಡಿದ್ದು, ಬಳಿಕ ಶ್ರೀರಂಗದೇವಾಲಯದ ಮುಂಭಾಗ ವೇದಿಕೆ ಕಾರ್ಯಕ್ರಮಕ್ಕೆ ಶಿವರಾಜ್‌ ಕುಮಾರ್‌ ಆಗಮಿಸುತ್ತಿದ್ದಂತೆ, ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳು ಜೈಕಾರ ಹಾಕಿದರು.

ವೇದಿಕೆಯಲ್ಲಿ ಶಿವಣ್ಣ ನಟನೆಯ ಬೈರತಿ ರಣಗಲ್‌ ಚಿತ್ರದ ಟೀಸರ್‌ ಪ್ರದರ್ಶನ್‌ ಮಾಡಲಾಯಿತು.

ಶ್ರೀರಂಗಪಟ್ಟಣ, ಮೈಸೂರು ಅದೃಷ್ಟದ ಸ್ಥಳ

ಬಳಿಕ ಮಾತನಾಡಿದ ಅವರು, ಬಹಳಷ್ಟು ಚಲನಚಿತ್ರಗಳನ್ನು ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ಮಾಡಲಾಗಿದೆ. ಶ್ರೀರಂಗಪಟ್ಟಣದಲ್ಲಿ ಅಭಿಮಾನಿಗಳು, ಬಂಧುಬಳಗ ಹೆಚ್ಚು, ಶ್ರೀರಂಗಪಟ್ಟಣ ಹಾಗೂ ಮೈಸೂರು ನನಗೆ ಅದೃಷ್ಟದ ಸ್ಥಳಗಳಾಗಿದ್ದು, ಇಲ್ಲಿ ಮಾಡುವ ಚಲನಚಿತ್ರಗಳು ಯಶಸ್ವಿಯಾಗಿದೆ ಎಂದು ನುಡಿದರು.

ಯಾವುದೇ ಜಾತಿ, ಮತ, ಪಂಥಗಳಿಗೆ ಹಬ್ಬ ಮೀಸಲಾಗದೇ ಎಲ್ಲರೂ ಒಟ್ಟಿಗೆ ಭಾಗವಹಿಸಿ ಆಚರಿಸುವ ಹಬ್ಬವೇ ದಸರಾ ಹಬ್ಬವಾಗಿದೆ. ಈ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿದರು.

ನಂತರ, ಹಸಿದಾಗ ಅನ್ನ ದಣಿದಾಗ ನೀರು, ಇವನ್ಯಾರ ಮಗನೋ, ಯಾರೇ ಕೂಗಾಡಲಿ, ಗೊಂಬೆ ಹೇಳುತೈತೆ ಹಾಡುಗಳನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago