ಮಂಡ್ಯ

ಕಾವೇರಿ ದಡದಲ್ಲಿ ಕಳೆಗಟ್ಟಿದ ದಸರಾ: ರಂಗನಾಥ ದೇವಲಾಯದ ಎದುರು 800ಮಂದಿ ಯೋಗಾಸನ..

ಶ್ರೀರಂಗಪಟ್ಟಣ: ಐದು ದಿನಗಳ ಕಾಲದ ಶ್ರೀರಂಗಪಟ್ಟಣ ದಸರಾವು ಕಳೆಗಟ್ಟಿದ್ದು, ಭಾನುವಾರ ಮುಂಜಾನೆಯೇ ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಎದುರು 80o ಕ್ಕೂ ಅಧಿಕ ಮಂದಿ ಯೋಗಾ ಪಟುಗಳು ಯೋಗಾ ಪ್ರದರ್ಶಿಸಿದರು.

ಶ್ರೀರಂಗಪಟ್ಟಣ ದಸರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಯೋಗದಸರಾದಲ್ಲಿ ಯೋಗ ಪಟುಗಳು ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿ ಗಮನ ಸೆಳೆದರು.

ಯೋಗ ಪಟುಗಳು, ಸೂರ್ಯ ನಮಸ್ಕಾರ, ಭುಜಂಗಾಸನ, ವಜ್ರಾಸನ, ತಡಾಸನ, ಅರ್ಧಚಕ್ರಾಸನ, ಉಷ್ಟ್ರಾಸನ, ಧನುರಾಸನ, ಶವಾಸನ, ಪ್ರಣಾಯಾಮ, ಧ್ಯಾನ ಸೇರಿದಂತೆ ವಿವಿಧ ಆಸನಗಳನ್ನು ಪ್ರದರ್ಶಿಸಿದರು.

ಯೋಗ ದಸರಾಗೆ ಚಾಲನೆ ನೀಡಿ ಮಾತನಾಡಿದ ಉಪವಿಭಾಗಾಧಿಕಾರಿ ಶಿವಮೂರ್ತಿ, ಯೋಗದಿಂದ ಮನುಷ್ಯನ ವಯಸ್ಸು ಹಾಗೂ ಆರೋಗ್ಯ ವೃದ್ಧಿಯಾಗುತ್ತದೆ.‌ ಪ್ರತಿಯೊಬ್ಬರು ಯೋಗವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು  ಸಲಹೆ ನೀಡಿದರು.

ಮನುಷ್ಯನ ಶ್ರೀಮಂತಿಕೆ ಆರೋಗ್ಯದಲ್ಲಿದೆ. ಎಷ್ಟೇ ಹಣ, ಆಸ್ತಿ, ಹೆಸರು ಸಂಪಾದಿಸಿದರು ಕೂಡ ಆರೋಗ್ಯ ಭಾಗ್ಯ ಇಲ್ಲವೆಂದರೆ ಎಲ್ಲವೂ ಶೂನ್ಯವಾಗುತ್ತದೆ. ಆರೋಗ್ಯ ವೃದ್ಧಿಸಿಕೊಳ್ಳುವ ವ್ಯಾಯಮ, ಯೋಗದಂತಹ ಚಟುವಟಿಕೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ಪ್ರಾಚೀನ ಕಾಲದಿಂದಲೂ ಋಷಿಮುನಿಗಳು ಪ್ರತಿದಿನ ಯೋಗಾಭ್ಯಾಸವನ್ನು ಮಾಡುತ್ತಿದ್ದರು. ಆದರಿಂದ ಅವರು ಅನೇಕ ವರ್ಷಗಳ ಕಾಲ ಅರೋಗ್ಯದಿಂದ ಇರುತ್ತಿದ್ದರು. ಎಲ್ಲರೂ ಕೂಡ ಅವರನ್ನು ಅನುಸರಿಸಿ ಯೋಗವನ್ನು ನಮ್ಮ ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು.

ಯೋಗ ಭಾರತ ದೇಶದಲ್ಲಿ ಹುಟ್ಟಿ ಇಂದು ಪ್ರಪಂಚದಾದ್ಯಂತ  ಪಸರಿಸಿದೆ. ಯೋಗವು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನ 40 ರಿಂದ 45 ನಿಮಿಷಗಳ ಕಾಲ ಯೋಗವನ್ನು ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ರೋಗ ಬಂದ ಮೇಲೆ ವೈದ್ಯರಿಂದ ಚಿಕಿತ್ಸೆ ಪಡೆಯುವುದಕ್ಕಿಂತ ಎಲ್ಲರೂ ಯೋಗ ಅಭ್ಯಾಸ ಮಾಡಿ ರೋಗಗಳು ಬಾರದಂತೆ ನೋಡಿಕೊಳ್ಳುವುದು ಉತ್ತಮ ಸಲಹೆ ನೀಡಿದರು.

ಶ್ರೀರಂಗಪಟ್ಟಣ ತಾಲೂಕಿನ ತಹಶೀಲ್ದಾರ್ ಪರಶುರಾಮ ಮಾತನಾಡಿ, ಕಳೆದ ಎರಡು ದಿನಗಳಿಂದ ಶ್ರೀರಂಗಪಟ್ಟಣ ದಸರಾ ಹಬ್ಬವನ್ನು ಆಚರಿಸುತಿದ್ದೇವೆ. ಅದಕ್ಕೆ ಪೂರಕವಾಗಿ ಇಂದು ಯೋಗ ದಸರಾವನ್ನು ಆಯುಷ್ ಇಲಾಖೆ ಹಾಗೂ ಕ್ರೀಡಾ ಇಲಾಖೆ ಸೇರಿ ಆಯೋಜಿಸಿದ್ದು ಯೋಗ ದಸರಾಗೆ ಶುಭವಾಗಲಿ ಎಂದು ಹಾರೈಸಿದರು.

ಕೆ. ಶೆಟ್ಟಹಳ್ಳಿ ವಿವೇಕಾನಂದ ಯೋಗ ಕಿಶೋರ ಕೇಂದ್ರದ ಯೋಗ ಗುರು ಅಪ್ಪಾಜಿ ಮಾತನಾಡಿ, ಪ್ರತಿಯೊಬ್ಬರೂ ಯೋಗದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಪ್ರತಿ ಮಕ್ಕಳಲ್ಲಿಯೂ ಸಹ ಯೋಗದ ಅರಿವನ್ನು ಮೂಡಿಸಬೇಕು. ದೇಹ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ. ಆದ್ದರಿಂದ ಯೋಗದ ಮಹತ್ವವನ್ನು ಎಲ್ಲರೂ ಎಲ್ಲೆಡೆ ಪಸರಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಡಾ ಕಲಾದರ್, ಪತಂಜಲಿ ಸಂಸ್ಥೆಯ ಯೋಗ ಶಿಕ್ಷಕ ರವಿ ವಿ. ವಿ, ಯೋಗ ಶಿಕ್ಷಕ ಚಂದ್ರು, ಬಂಡೂರಿನ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಹಿರಿಯ ವೈದ್ಯೆ ಶೋಭಾ ಆರ್ ಜೆ ಅವರುಗಳನ್ನು ಸನ್ಮಾನಿಸಲಾಯಿತು.

ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ರಂಗಸ್ವಾಮಿ, ಶ್ರೀರಂಗಪಟ್ಟಣ ಪುರಸಭೆ ಮುಖ್ಯಧಿಕಾರಿ ರಾಜಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್ ಹೆಚ್, ಎಸ್.ಪಿ.ವೈ. ಎಸ್.ಎಸ್ ನ ಜಿಲ್ಲಾ ಸಂಚಾಲಕ ಶಂಕರ್ ನಾರಾಯಣಶಾಸ್ತ್ರೀ, ಮಂಡ್ಯ ವಿವೇಕಾನಂದ ಯೋಗ ಕೇಂದ್ರದ ಚಂದ್ರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

29 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

34 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

43 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago