ಮಂಡ್ಯ

ಕಾವೇರಿ ದಡದಲ್ಲಿ ಕಳೆಗಟ್ಟಿದ ದಸರಾ: ರಂಗನಾಥ ದೇವಲಾಯದ ಎದುರು 800ಮಂದಿ ಯೋಗಾಸನ..

ಶ್ರೀರಂಗಪಟ್ಟಣ: ಐದು ದಿನಗಳ ಕಾಲದ ಶ್ರೀರಂಗಪಟ್ಟಣ ದಸರಾವು ಕಳೆಗಟ್ಟಿದ್ದು, ಭಾನುವಾರ ಮುಂಜಾನೆಯೇ ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಎದುರು 80o ಕ್ಕೂ ಅಧಿಕ ಮಂದಿ ಯೋಗಾ ಪಟುಗಳು ಯೋಗಾ ಪ್ರದರ್ಶಿಸಿದರು.

ಶ್ರೀರಂಗಪಟ್ಟಣ ದಸರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಯೋಗದಸರಾದಲ್ಲಿ ಯೋಗ ಪಟುಗಳು ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿ ಗಮನ ಸೆಳೆದರು.

ಯೋಗ ಪಟುಗಳು, ಸೂರ್ಯ ನಮಸ್ಕಾರ, ಭುಜಂಗಾಸನ, ವಜ್ರಾಸನ, ತಡಾಸನ, ಅರ್ಧಚಕ್ರಾಸನ, ಉಷ್ಟ್ರಾಸನ, ಧನುರಾಸನ, ಶವಾಸನ, ಪ್ರಣಾಯಾಮ, ಧ್ಯಾನ ಸೇರಿದಂತೆ ವಿವಿಧ ಆಸನಗಳನ್ನು ಪ್ರದರ್ಶಿಸಿದರು.

ಯೋಗ ದಸರಾಗೆ ಚಾಲನೆ ನೀಡಿ ಮಾತನಾಡಿದ ಉಪವಿಭಾಗಾಧಿಕಾರಿ ಶಿವಮೂರ್ತಿ, ಯೋಗದಿಂದ ಮನುಷ್ಯನ ವಯಸ್ಸು ಹಾಗೂ ಆರೋಗ್ಯ ವೃದ್ಧಿಯಾಗುತ್ತದೆ.‌ ಪ್ರತಿಯೊಬ್ಬರು ಯೋಗವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು  ಸಲಹೆ ನೀಡಿದರು.

ಮನುಷ್ಯನ ಶ್ರೀಮಂತಿಕೆ ಆರೋಗ್ಯದಲ್ಲಿದೆ. ಎಷ್ಟೇ ಹಣ, ಆಸ್ತಿ, ಹೆಸರು ಸಂಪಾದಿಸಿದರು ಕೂಡ ಆರೋಗ್ಯ ಭಾಗ್ಯ ಇಲ್ಲವೆಂದರೆ ಎಲ್ಲವೂ ಶೂನ್ಯವಾಗುತ್ತದೆ. ಆರೋಗ್ಯ ವೃದ್ಧಿಸಿಕೊಳ್ಳುವ ವ್ಯಾಯಮ, ಯೋಗದಂತಹ ಚಟುವಟಿಕೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ಪ್ರಾಚೀನ ಕಾಲದಿಂದಲೂ ಋಷಿಮುನಿಗಳು ಪ್ರತಿದಿನ ಯೋಗಾಭ್ಯಾಸವನ್ನು ಮಾಡುತ್ತಿದ್ದರು. ಆದರಿಂದ ಅವರು ಅನೇಕ ವರ್ಷಗಳ ಕಾಲ ಅರೋಗ್ಯದಿಂದ ಇರುತ್ತಿದ್ದರು. ಎಲ್ಲರೂ ಕೂಡ ಅವರನ್ನು ಅನುಸರಿಸಿ ಯೋಗವನ್ನು ನಮ್ಮ ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು.

ಯೋಗ ಭಾರತ ದೇಶದಲ್ಲಿ ಹುಟ್ಟಿ ಇಂದು ಪ್ರಪಂಚದಾದ್ಯಂತ  ಪಸರಿಸಿದೆ. ಯೋಗವು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನ 40 ರಿಂದ 45 ನಿಮಿಷಗಳ ಕಾಲ ಯೋಗವನ್ನು ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ರೋಗ ಬಂದ ಮೇಲೆ ವೈದ್ಯರಿಂದ ಚಿಕಿತ್ಸೆ ಪಡೆಯುವುದಕ್ಕಿಂತ ಎಲ್ಲರೂ ಯೋಗ ಅಭ್ಯಾಸ ಮಾಡಿ ರೋಗಗಳು ಬಾರದಂತೆ ನೋಡಿಕೊಳ್ಳುವುದು ಉತ್ತಮ ಸಲಹೆ ನೀಡಿದರು.

ಶ್ರೀರಂಗಪಟ್ಟಣ ತಾಲೂಕಿನ ತಹಶೀಲ್ದಾರ್ ಪರಶುರಾಮ ಮಾತನಾಡಿ, ಕಳೆದ ಎರಡು ದಿನಗಳಿಂದ ಶ್ರೀರಂಗಪಟ್ಟಣ ದಸರಾ ಹಬ್ಬವನ್ನು ಆಚರಿಸುತಿದ್ದೇವೆ. ಅದಕ್ಕೆ ಪೂರಕವಾಗಿ ಇಂದು ಯೋಗ ದಸರಾವನ್ನು ಆಯುಷ್ ಇಲಾಖೆ ಹಾಗೂ ಕ್ರೀಡಾ ಇಲಾಖೆ ಸೇರಿ ಆಯೋಜಿಸಿದ್ದು ಯೋಗ ದಸರಾಗೆ ಶುಭವಾಗಲಿ ಎಂದು ಹಾರೈಸಿದರು.

ಕೆ. ಶೆಟ್ಟಹಳ್ಳಿ ವಿವೇಕಾನಂದ ಯೋಗ ಕಿಶೋರ ಕೇಂದ್ರದ ಯೋಗ ಗುರು ಅಪ್ಪಾಜಿ ಮಾತನಾಡಿ, ಪ್ರತಿಯೊಬ್ಬರೂ ಯೋಗದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಪ್ರತಿ ಮಕ್ಕಳಲ್ಲಿಯೂ ಸಹ ಯೋಗದ ಅರಿವನ್ನು ಮೂಡಿಸಬೇಕು. ದೇಹ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ. ಆದ್ದರಿಂದ ಯೋಗದ ಮಹತ್ವವನ್ನು ಎಲ್ಲರೂ ಎಲ್ಲೆಡೆ ಪಸರಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಡಾ ಕಲಾದರ್, ಪತಂಜಲಿ ಸಂಸ್ಥೆಯ ಯೋಗ ಶಿಕ್ಷಕ ರವಿ ವಿ. ವಿ, ಯೋಗ ಶಿಕ್ಷಕ ಚಂದ್ರು, ಬಂಡೂರಿನ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಹಿರಿಯ ವೈದ್ಯೆ ಶೋಭಾ ಆರ್ ಜೆ ಅವರುಗಳನ್ನು ಸನ್ಮಾನಿಸಲಾಯಿತು.

ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ರಂಗಸ್ವಾಮಿ, ಶ್ರೀರಂಗಪಟ್ಟಣ ಪುರಸಭೆ ಮುಖ್ಯಧಿಕಾರಿ ರಾಜಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್ ಹೆಚ್, ಎಸ್.ಪಿ.ವೈ. ಎಸ್.ಎಸ್ ನ ಜಿಲ್ಲಾ ಸಂಚಾಲಕ ಶಂಕರ್ ನಾರಾಯಣಶಾಸ್ತ್ರೀ, ಮಂಡ್ಯ ವಿವೇಕಾನಂದ ಯೋಗ ಕೇಂದ್ರದ ಚಂದ್ರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago