ಮಂಡ್ಯ

ಮತ್ತೆ ಮುನ್ನೆಲೆಗೆ ಬಂತು ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ವಿವಾದ : ಹೈಕೋರ್ಟ್ ನಲ್ಲಿ ನಾಳೆ ವಿಚಾರಣೆ

ಮಂಡ್ಯ : ಮತ್ತೆ ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದ್ದು, ನಾಳೆ ಹೈ ಕೋರ್ಟ್‌ ನಲ್ಲಿ ವಿಚಾರಣೆ ನಡೆಯಲಿದೆ.

ಈ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ವಿವಾದ ಇಂದು ನಿನ್ನೆಯದ್ದು ಅಲ್ಲ. ಹಲವು ವರ್ಷಗಳಿಂದಲೂ ಈ ವಿವಾದ ಕೇಳಿ ಬರುತ್ತಲೆ ಇದೆ. ಟಿಪ್ಪು ಸುಲ್ತಾನ್‌ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇಗುಲ ಕೆಡವಿ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಮತ್ತೆ ಮಸೀದಿ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇಗುಲ ನಿರ್ಮಾಣ ಮಾಡಬೇಕೆಂದು ಹಲವು ವರ್ಷಗಳಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಹನುಮಂತ ಭಕ್ತರು ಪ್ರತಿಭಟನೆ ನಡೆಸಿದ್ದರು.  ಇದೀಗ ಭಜರಂಗ ಸೇನೆ ೧೦೧ ಹನುಮ ಭಕ್ತರ ಮೂಲಕ ಹೈಕೋರ್ಟ್‌ನಲ್ಲಿ ದಾವೆ ಹೂಡಿದೆ.

ಇಷ್ಟು ದಿನ ಪ್ರತಿಭಟನೆ ಮೂಲಕ ಹೋರಾಡುತ್ತಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಇದೀಗ ನ್ಯಾಯಾಲಯದ ಮೊರೆ ಹೋಗಿದ್ದಾರೆ.  ಜಾಮೀಯಾ ಮಸೀದಿ ಒಂದು ಮಸೀದಿಯಲ್ಲ. ಇದು ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ . ಈ ದೇವಸ್ಥಾನವನ್ನು ಕೆಡವಿ ಟಿಪ್ಪು ಸುಲ್ತಾನ್‌ ಜಮೀಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಇದು ದೇವಸ್ಥಾನ ಎನ್ನಲು ಹಿಂದೂ ದೇವಸ್ಥಾನಗಳ ಕಲ್ಲುಗಳು, ಕೆತ್ತನೆಗಳು, ಅಲ್ಲದೆ ಮಸೀದಿಯ ಒಳಭಾಗದಲ್ಲಿಯೇ ಹಿಂದೂ ದೇವಸ್ಥಾನದ ಕಲ್ಯಾಣಿ ಹಾಗೂ ಗೋಪುರದಲ್ಲಿ ಕಳಶಗಳೇ ಸಾಕ್ಷಿ. ಇವೇ ಸಾಕು ಇದು ಮಸೀದಿಯಲ್ಲ ಮಂದಿರ ಎಂದು ರೂಪಿಸುತ್ತವೆ. ಹೋಗಾಗಿ ಜಾಮೀಯಾ ಮಸೀದಿಯ ಜಾಗದಲ್ಲಿ ಮೊದಲು ಇದ್ದ ಮೂಡಲ ಆಂಜನೇಯಸ್ವಾಮಿ ದೇವಸ್ಥಾನ ಸ್ಫಾಪನೆಗೆ ಸರ್ವೇ ನಡೆಸಿ ಅವಕಾಶ ಕಲ್ಪಿಸಿಕೊಡಬೇಕೆಂದು ಭಜರಂಗ ಸೇನೆ ಹೈಕೋರ್ಟ್‌ ನಲ್ಲಿ ದಾವೆ ಹೂಡಿದೆ.

ಇನ್ನು ಈ ಕೇಸ್‌ ಅನ್ನು ಹೈಕೋರ್ಟ್‌ ಫೈಲ್‌ ಮಾಡಿಕೊಂಡಿದ್ದು, ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮಂಡ್ಯ ಡಿಸಿ, ವಕ್ಫ್‌ ಹಾಗೂ ಧಾರ್ಮಿಕ ದತ್ತಿ ಇಲಾಖೆಗಳಿಗೆ ಕೋರ್ಟ್‌ ನೋಟಿಸ್‌ ನೀಡಿದೆ. ಈ ಕೇಸ್‌ ಸಂಬಂಧ ಮೊದಲ ವಾದ ಪ್ರತಿವಾದಗಳು ನಾಳೆ ನಡೆಯಲಿದೆ. ಈಗಾಗಲೇ ಎಲ್ಲಾ ಇಲಾಖೆಯ ಮುಖ್ಯಸ್ಥರು ಕೋರ್ಟ್‌ ಗೆ ಬರುವಂತೆ ನ್ಯಾಯಾಧೀಶರು ಕೋರಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

7 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

15 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

22 mins ago